ಬೇಸಿಗೆಯ ಸುಡು ಬಿಸಿಲು ಮತ್ತು ಅಸಹನೀಯ ಧಗೆಯಿಂದಾಗಿ ಜನರು ತಂಪು ಪಾನೀಯಗಳ ಮೊರೆ ಹೋಗುವುದು ಅನಿವಾರ್ಯ ವಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಕಂಪೆನಿಗಳು ಬಹು ಮುಖ್ಯವಾಗಿ ಮಾವಿನ ಹಣ್ಣಿನ ರಸದ ಹೆಸರಿನಲ್ಲಿ ಮಾರಕ ರಾಸಾಯನಿಕಗಳನ್ನು ಜನರಿಗೆ ಕುಡಿಸುತ್ತಿವೆ . ಈ ಪಾನೀಯಗಳಲ್ಲಿ ಮಾವಿನ ಹಣ್ಣಿನ ಬದಲು ಟರ್ಟ್ರಾಜಿನ್ ನಂತಹ ಕೃತಕ ಬಣ್ಣ ಹಾಗೂ ಹೈ ಫ್ರಕ್ಟೋಸ್ ಕಾರ್ನ್ ಸಿರಪ್ ಬಳಸಲಾಗುತ್ತಿದೆ. ಇದು ಯಕೃತ್ತಿನ ಕಾಯಿಲೆ ಹಾಗೂ ಮಕ್ಕಳಲ್ಲಿ ಗಂಭೀರ ಪರಿಣಾಮ ಉಂಟುಮಾಡುತ್ತವೆ ಎಂಬ ಮಾಹಿತಿಗಳಿವೆ. ಇನ್ನು ತಯಾರಿಕಾ ಘಟಕಗಳ ಅಶುಚಿತ್ವ ಮತ್ತು ಕಲುಷಿತ ನೀರಿನ ಬಳಕೆಯು ಟೈಫಾಯ್ಡ್ ಹಾಗೂ ಕಾಲರಾದಂತಹ ರೋಗಗಳಿಗೆ ದಾರಿಯಾಗಿದೆ. ಅಂಕಿ ಅಂಶಗಳ ಪ್ರಕಾರ ಇಂತಹ ಪಾನೀಯಗಳಲ್ಲಿ ಶೇ.99ರಷ್ಟು ಹಣ್ಣಿನ ಅಂಶವೇ ಇರುವುದಿಲ್ಲ. ಸರ್ಕಾರವು ಆಹಾರ ಸುರಕ್ಷತಾ ತಪಾಸಣೆಯನ್ನು ತೀವ್ರಗೊಳಿಸಬೇಕು ಮತ್ತು ಕಲಬೆರಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.
– ಡಾ. ಎಚ್. ಕೆ. ವಿಜಯಕುಮಾರ್, ಬೆಂಗಳೂರು
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…