ಓದುಗರ ಪತ್ರ| ಸಂವಿಧಾನದ ಮಹತ್ವ ಅರಿಯಬೇಕು

ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥೆಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನುಡಿ ಬರೆಯಲಾಯಿತು. ಡಾ. ಬಿ. ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಸುಮಾರು ೨ ವರ್ಷ, ೧೧ ತಿಂಗಳು ೧೮ ದಿನಗಳ ಅವಧಿಯಲ್ಲಿ ಬೃಹತ್ ಸಂವಿಧಾನವನ್ನು ರಚಿಸಿ ೧೯೪೯ರ ನವೆಂಬರ್ ೨೬ರಂದು ಅಂಗೀಕರಿಸಲಾಯಿತು.

ಪ್ರಜಾಸತ್ತಾತ್ಮಕ, ಆಡಳಿತಾತ್ಮಕ, ಜಾತ್ಯತೀತ, ಸಮಾನತೆಯನ್ನು ಸಾರುವ ಹಾಗೂ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳ ಮೂಲಕ ದೇಶವನ್ನು ಸುಭದ್ರಗೊಳಿಸಿರುವ ಸಂವಿಧಾನವನ್ನು ಓದಿ ಅದರ ಮಹತ್ವ ಅರಿಯಬೇಕಾದದ್ದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ.

ಜಾತಿ-ಧರ್ಮಗಳನ್ನು ಒಗ್ಗೂಡಿಸಿ, ಸಾಮಾಜಿಕ ಅಸಮಾನತೆಯನ್ನು ದೂರಾಗಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವ ಆಶಯವನ್ನು ಹೊತ್ತ ಸಂವಿಧಾನವು ದೇಶದ ಬುಡಕಟ್ಟು ಸಮುದಾಯಗಳು, ಶೋಷಿತ ಹಾಗೂ ನೊಂದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಇಂತಹ ಸಂವಿಧಾನವನ್ನು ಅಂಗೀಕಾರ ಮಾಡಿದ ಈ ದಿನವನ್ನು ನಾವೆಲ್ಲ ಸಂಭ್ರಮದಿಂದ ಆಚರಿಸುವ ಮೂಲಕ ಸಂವಿಧಾನದ ಕುರಿತು ಜಾಗೃತಿ ಮೂಡಿಸಬೇಕಿದೆ.

-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

28 mins ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

43 mins ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಮಂಡ್ಯ ರಮೇಶ್, ಸಾಧು ಕೋಕಿಲಾ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಕನ್ನಡದ ಜನಪ್ರಿಯ ನಟ, ಸಂಗೀತ ನಿರ್ದೇಶಕ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿರುವ ಸಾಧು ಕೋಕಿಲಾ ಹಾಗೂ…

1 hour ago

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

5 hours ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

5 hours ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

5 hours ago