ಓದುಗರ ಪತ್ರ| ಸಂವಿಧಾನದ ಮಹತ್ವ ಅರಿಯಬೇಕು

ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥೆಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನುಡಿ ಬರೆಯಲಾಯಿತು. ಡಾ. ಬಿ. ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಸುಮಾರು ೨ ವರ್ಷ, ೧೧ ತಿಂಗಳು ೧೮ ದಿನಗಳ ಅವಧಿಯಲ್ಲಿ ಬೃಹತ್ ಸಂವಿಧಾನವನ್ನು ರಚಿಸಿ ೧೯೪೯ರ ನವೆಂಬರ್ ೨೬ರಂದು ಅಂಗೀಕರಿಸಲಾಯಿತು.

ಪ್ರಜಾಸತ್ತಾತ್ಮಕ, ಆಡಳಿತಾತ್ಮಕ, ಜಾತ್ಯತೀತ, ಸಮಾನತೆಯನ್ನು ಸಾರುವ ಹಾಗೂ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗಗಳ ಮೂಲಕ ದೇಶವನ್ನು ಸುಭದ್ರಗೊಳಿಸಿರುವ ಸಂವಿಧಾನವನ್ನು ಓದಿ ಅದರ ಮಹತ್ವ ಅರಿಯಬೇಕಾದದ್ದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ.

ಜಾತಿ-ಧರ್ಮಗಳನ್ನು ಒಗ್ಗೂಡಿಸಿ, ಸಾಮಾಜಿಕ ಅಸಮಾನತೆಯನ್ನು ದೂರಾಗಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸುವ ಆಶಯವನ್ನು ಹೊತ್ತ ಸಂವಿಧಾನವು ದೇಶದ ಬುಡಕಟ್ಟು ಸಮುದಾಯಗಳು, ಶೋಷಿತ ಹಾಗೂ ನೊಂದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಇಂತಹ ಸಂವಿಧಾನವನ್ನು ಅಂಗೀಕಾರ ಮಾಡಿದ ಈ ದಿನವನ್ನು ನಾವೆಲ್ಲ ಸಂಭ್ರಮದಿಂದ ಆಚರಿಸುವ ಮೂಲಕ ಸಂವಿಧಾನದ ಕುರಿತು ಜಾಗೃತಿ ಮೂಡಿಸಬೇಕಿದೆ.

-ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago