ಓದುಗರ ಪತ್ರ
ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಂದಿನಿ ತುಪ್ಪದ ಗುಣಮಟ್ಟಕ್ಕೆ ಸಂದ ಗರಿಮೆ ಎಂದರೆ ತಪ್ಪಲಾಗಲಾರದು. ಕೆಲ ವರ್ಷಗಳ ಹಿಂದಿನ ವರೆಗೂ ತಿರುಪತಿಯಲ್ಲಿ ಲಡ್ಡುಗಳ ತಯಾರಿಕೆಗೆ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು. ಆದರೆ ನಂದಿನಿ ತುಪ್ಪದ ಬೆಲೆ ದುಬಾರಿಯಾಯಿತು ಎಂದು ಟಿಟಿಡಿ ಆಡಳಿತ ಮಂಡಳಿಯವರು ಲಡ್ಡುಗಳ ತಯಾರಿಕೆಯನ್ನು ಗುತ್ತಿಗೆದಾರರಿಗೆ ಟೆಂಡರ್ ನೀಡಿದರು. ಇದರ ಪರಿಣಾಮ ಗುತ್ತಿಗೆದಾರರು ಲಡ್ಡುಗಳಿಗೆ ಕಲಬೆರಿಕೆ ತುಪ್ಪದ ಜತೆಗೆ ಪ್ರಾಣಿಗಳ ಕೊಂಬಿನಾಂಶವನ್ನೂ ಸೇರಿಸಿ ತಯಾರಿಸಿ ತಿರುಪತಿಗೆ ಕಳಂಕ ತಂದಿದ್ದಾರೆ.
ಸದ್ಯ ಲಡ್ಡು ತಯಾರಿಕೆಗೆ ನಂದಿನ ತುಪ್ಪದ ಮೊರೆ ಹೋಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕೆಎಂಎಫ್ ಇದರಲ್ಲಿಯೂ ಕಲಬೆರಿಕೆಯಾಗದಂತೆ ಎಚ್ಚವಹಿಸುವುದು ಅಗತ್ಯ.
ಅಂದಹಾಗೆ ಒಂದೆರಡು ವರ್ಷಗಳ ಹಿಂದೆ ಮೈಸೂರಿನಲ್ಲಿಯೂ ನಕಲಿ ತುಪ್ಪದ ಹಾವಳಿ ಹೆಚ್ಚಾಗಿತ್ತು. ಈ ಪ್ರಕರಣ ಭಾರೀ ಸುದ್ದಿಯಾಗಿತ್ತು. ಬಳಿಕ ಪೊಲೀಸರು ದಾಳಿ ನಡೆಸಿ ಅಕ್ರಮಕ್ಕೆ ಬ್ರೇಕ್ ಹಾಕಿದ್ದರು. ಆದ್ದರಿಂದ ಕೆಎಂಎಫ್ನವರು ಈ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅಗತ್ಯ.
-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…