ಓದುಗರ ಪತ್ರ

ಓದುಗರ ಪತ್ರ: ನಂದಿನಿ ತುಪ್ಪದ ಗುಣಮಟ್ಟಕ್ಕೆ ಸಂದ ಗರಿಮೆ

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವುದು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕರ್ನಾಟಕದಿಂದ ನಂದಿನಿ ತುಪ್ಪ ಖರೀದಿಸಿ ಲಡ್ಡುಗಳನ್ನು ತಯಾರಿಕೆಗೆ ಬಳಸಲು ಪ್ರಾರಂಭಿಸಿದ್ದೇವೆ ಎಂದು ಹೇಳಿರುವುದಾಗಿ ವರದಿಯಾಗಿದೆ. ಇದು ನಂದಿನಿ ತುಪ್ಪದ ಗುಣಮಟ್ಟಕ್ಕೆ ಸಂದ ಗರಿಮೆ ಎಂದರೆ ತಪ್ಪಲಾಗಲಾರದು. ಕೆಲ ವರ್ಷಗಳ ಹಿಂದಿನ ವರೆಗೂ ತಿರುಪತಿಯಲ್ಲಿ ಲಡ್ಡುಗಳ ತಯಾರಿಕೆಗೆ ನಂದಿನಿ ತುಪ್ಪವನ್ನೇ ಬಳಕೆ ಮಾಡಲಾಗುತ್ತಿತ್ತು. ಆದರೆ ನಂದಿನಿ ತುಪ್ಪದ ಬೆಲೆ ದುಬಾರಿಯಾಯಿತು ಎಂದು ಟಿಟಿಡಿ ಆಡಳಿತ ಮಂಡಳಿಯವರು ಲಡ್ಡುಗಳ ತಯಾರಿಕೆಯನ್ನು ಗುತ್ತಿಗೆದಾರರಿಗೆ ಟೆಂಡರ್ ನೀಡಿದರು. ಇದರ ಪರಿಣಾಮ ಗುತ್ತಿಗೆದಾರರು ಲಡ್ಡುಗಳಿಗೆ ಕಲಬೆರಿಕೆ ತುಪ್ಪದ ಜತೆಗೆ ಪ್ರಾಣಿಗಳ ಕೊಂಬಿನಾಂಶವನ್ನೂ ಸೇರಿಸಿ ತಯಾರಿಸಿ ತಿರುಪತಿಗೆ ಕಳಂಕ ತಂದಿದ್ದಾರೆ.

ಸದ್ಯ ಲಡ್ಡು ತಯಾರಿಕೆಗೆ ನಂದಿನ ತುಪ್ಪದ ಮೊರೆ ಹೋಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕೆಎಂಎಫ್ ಇದರಲ್ಲಿಯೂ ಕಲಬೆರಿಕೆಯಾಗದಂತೆ ಎಚ್ಚವಹಿಸುವುದು ಅಗತ್ಯ.

ಅಂದಹಾಗೆ ಒಂದೆರಡು ವರ್ಷಗಳ ಹಿಂದೆ ಮೈಸೂರಿನಲ್ಲಿಯೂ ನಕಲಿ ತುಪ್ಪದ ಹಾವಳಿ ಹೆಚ್ಚಾಗಿತ್ತು. ಈ ಪ್ರಕರಣ ಭಾರೀ ಸುದ್ದಿಯಾಗಿತ್ತು. ಬಳಿಕ ಪೊಲೀಸರು ದಾಳಿ ನಡೆಸಿ ಅಕ್ರಮಕ್ಕೆ ಬ್ರೇಕ್ ಹಾಕಿದ್ದರು. ಆದ್ದರಿಂದ ಕೆಎಂಎಫ್‌ನವರು ಈ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅಗತ್ಯ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

42 mins ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

3 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

4 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

5 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

7 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

7 hours ago