ಓದುಗರ ಪತ್ರ

ಓದುಗರ ಪತ್ರ | ಮೈಸೂರಿನ ಜನತೆಗೆ ನೀರಿನ ದರ ಏರಿಕೆಯ ಶಾಕ್!

ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ.

ಮೈಸೂರು ಮಹಾನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಅನಿಸುತ್ತೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ಇತ್ತ ಮಹಾನಗರ ಪಾಲಿಕೆಯು ನೀರಿನ ತೆರಿಗೆಯನ್ನು ಹೆಚ್ಚಿಸಿದ್ದು, ಈ ಹಿಂದೆ ೧೬೪ ರೂ. ಗಳಿದ್ದ ನೀರಿನ ಶುಲ್ಕವನ್ನು ೨೫೦ ರೂ. ಗಳಿಗೆ ಏರಿಸಿದೆ. ಒಳಚರಂಡಿ ಶುಲ್ಕವನ್ನು ೩೮ ರೂ. ಗಳಿಂದ ೭೫ ರೂ. ಗಳಿಗೆ ಏರಿಸಿದೆ. ಇನ್ನು ಸೇವಾ ಶುಲ್ಕವನ್ನು ೧ ರೂ. ಇದಿದ್ದನ್ನು ೨ ರೂ. ಗಳಿಗೆ ಏರಿಸಲಾಗಿದೆ.

ಆ ಮೂಲಕ ನೀರಿನ ತೆರಿಗೆಯನ್ನು ೩೨೭ ರೂ. ಗಳಿಗೆ ಏರಿಸಲಾಗಿದ್ದು, ಶೇ. ೧೦೦ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆ ಕಂಡಂತಾಗಿದೆ. ತಮ್ಮದು ಜನಪರ ಸರ್ಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ತವರು ಜಿಲ್ಲೆಯಲ್ಲಿ ದರ ಏರಿಕೆ ಪ್ರಹಾರಕ್ಕೆ ಜನರು ಕಂಗಾಲಾಗಿದ್ದರೂ ಇತ್ತ ಗಮನಹರಿಸದಿರುವುದು ಬೇಸರದ ಸಂಗತಿ. ಕೂಡಲೇ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ನೀರಿನ ದರ ಇಳಿಸುವಂತೆ ಪಾಲಿಕೆಗೆ ಸೂಚಿಸಬೇಕಿದೆ. -ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗೃಹಲಕ್ಷ್ಮಿಗೆ ಮತ್ತೆ ತಾಂತ್ರಿಕ ಸಮಸ್ಯೆ ; ಬಾಕಿ ಹಣ ಬಿಡುಗಡೆ ವಿಳಂಬ?

ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ರಾಜ್ಯ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದ್ದ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ…

5 mins ago

ದುರಂಧರ್‌ ಸಕ್ಸಸ್ | ‌ದಿಢೀರ್‌ ಸಂಭಾವನೆ ಏರಿಕೆ ; ದೃಶ್ಯಂ-3 ಚಿತ್ರದಿಂದ ಹೊರಬಂದ ಅಕ್ಷಯ್‌ ಖನ್ನಾ

ಮುಂಬೈ : ಬಾಲಿವುಡ್‌, ಟಾಲಿವುಡ್‌, ಸ್ಯಾಂಡಲ್‌ವುಡ್‌ ಸೇರಿದಂತೆ ಎಲ್ಲಾ ವುಡ್‌ಗಳಲ್ಲಿಯೂ ಧುರಂಧರ್‌ದೆ ಹಾವಳಿ. ಈ ವರ್ಷದ ಅತಿ ಹೆಚ್ಚು ಕೆಲಕ್ಷನ್…

18 mins ago

ಅಧಿಕಾರ ಹಂಚಿಕೆ ದೊಂಬರಾಟದಂತಿದೆ : ಎಚ್.ಡಿ.ದೇವೇಗೌಡ ಟೀಕೆ

ಬೆಂಗಳೂರು : ಅಧಿಕಾರ ಹಸ್ತಾಂತರದ ವಿಚಾರದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹೈಡ್ರಾಮ ಆಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು…

33 mins ago

ಮಂತ್ರಾಲಯಕ್ಕೆ ಭೇಟಿ ನೀಡಿದ ನಟ ರಿಷಬ್‌ ಶೆಟ್ಟಿ ಕುಟುಂಬ

ರಾಯಚೂರು: ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು.…

2 hours ago

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

2 hours ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

2 hours ago