ಓದುಗರ ಪತ್ರ

ಓದುಗರ ಪತ್ರ | ಮೈಸೂರಿನ ಜನತೆಗೆ ನೀರಿನ ದರ ಏರಿಕೆಯ ಶಾಕ್!

ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ.

ಮೈಸೂರು ಮಹಾನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಅನಿಸುತ್ತೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ಇತ್ತ ಮಹಾನಗರ ಪಾಲಿಕೆಯು ನೀರಿನ ತೆರಿಗೆಯನ್ನು ಹೆಚ್ಚಿಸಿದ್ದು, ಈ ಹಿಂದೆ ೧೬೪ ರೂ. ಗಳಿದ್ದ ನೀರಿನ ಶುಲ್ಕವನ್ನು ೨೫೦ ರೂ. ಗಳಿಗೆ ಏರಿಸಿದೆ. ಒಳಚರಂಡಿ ಶುಲ್ಕವನ್ನು ೩೮ ರೂ. ಗಳಿಂದ ೭೫ ರೂ. ಗಳಿಗೆ ಏರಿಸಿದೆ. ಇನ್ನು ಸೇವಾ ಶುಲ್ಕವನ್ನು ೧ ರೂ. ಇದಿದ್ದನ್ನು ೨ ರೂ. ಗಳಿಗೆ ಏರಿಸಲಾಗಿದೆ.

ಆ ಮೂಲಕ ನೀರಿನ ತೆರಿಗೆಯನ್ನು ೩೨೭ ರೂ. ಗಳಿಗೆ ಏರಿಸಲಾಗಿದ್ದು, ಶೇ. ೧೦೦ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆ ಕಂಡಂತಾಗಿದೆ. ತಮ್ಮದು ಜನಪರ ಸರ್ಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ತವರು ಜಿಲ್ಲೆಯಲ್ಲಿ ದರ ಏರಿಕೆ ಪ್ರಹಾರಕ್ಕೆ ಜನರು ಕಂಗಾಲಾಗಿದ್ದರೂ ಇತ್ತ ಗಮನಹರಿಸದಿರುವುದು ಬೇಸರದ ಸಂಗತಿ. ಕೂಡಲೇ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ನೀರಿನ ದರ ಇಳಿಸುವಂತೆ ಪಾಲಿಕೆಗೆ ಸೂಚಿಸಬೇಕಿದೆ. -ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

8 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

10 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

11 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

12 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

14 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

14 hours ago