ಓದುಗರ ಪತ್ರ
ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ.
ಮೈಸೂರು ಮಹಾನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಅನಿಸುತ್ತೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ಇತ್ತ ಮಹಾನಗರ ಪಾಲಿಕೆಯು ನೀರಿನ ತೆರಿಗೆಯನ್ನು ಹೆಚ್ಚಿಸಿದ್ದು, ಈ ಹಿಂದೆ ೧೬೪ ರೂ. ಗಳಿದ್ದ ನೀರಿನ ಶುಲ್ಕವನ್ನು ೨೫೦ ರೂ. ಗಳಿಗೆ ಏರಿಸಿದೆ. ಒಳಚರಂಡಿ ಶುಲ್ಕವನ್ನು ೩೮ ರೂ. ಗಳಿಂದ ೭೫ ರೂ. ಗಳಿಗೆ ಏರಿಸಿದೆ. ಇನ್ನು ಸೇವಾ ಶುಲ್ಕವನ್ನು ೧ ರೂ. ಇದಿದ್ದನ್ನು ೨ ರೂ. ಗಳಿಗೆ ಏರಿಸಲಾಗಿದೆ.
ಆ ಮೂಲಕ ನೀರಿನ ತೆರಿಗೆಯನ್ನು ೩೨೭ ರೂ. ಗಳಿಗೆ ಏರಿಸಲಾಗಿದ್ದು, ಶೇ. ೧೦೦ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆ ಕಂಡಂತಾಗಿದೆ. ತಮ್ಮದು ಜನಪರ ಸರ್ಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ತವರು ಜಿಲ್ಲೆಯಲ್ಲಿ ದರ ಏರಿಕೆ ಪ್ರಹಾರಕ್ಕೆ ಜನರು ಕಂಗಾಲಾಗಿದ್ದರೂ ಇತ್ತ ಗಮನಹರಿಸದಿರುವುದು ಬೇಸರದ ಸಂಗತಿ. ಕೂಡಲೇ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ನೀರಿನ ದರ ಇಳಿಸುವಂತೆ ಪಾಲಿಕೆಗೆ ಸೂಚಿಸಬೇಕಿದೆ. -ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…