ಓದುಗರ ಪತ್ರ
ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ.
ಮೈಸೂರು ಮಹಾನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಅನಿಸುತ್ತೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ಇತ್ತ ಮಹಾನಗರ ಪಾಲಿಕೆಯು ನೀರಿನ ತೆರಿಗೆಯನ್ನು ಹೆಚ್ಚಿಸಿದ್ದು, ಈ ಹಿಂದೆ ೧೬೪ ರೂ. ಗಳಿದ್ದ ನೀರಿನ ಶುಲ್ಕವನ್ನು ೨೫೦ ರೂ. ಗಳಿಗೆ ಏರಿಸಿದೆ. ಒಳಚರಂಡಿ ಶುಲ್ಕವನ್ನು ೩೮ ರೂ. ಗಳಿಂದ ೭೫ ರೂ. ಗಳಿಗೆ ಏರಿಸಿದೆ. ಇನ್ನು ಸೇವಾ ಶುಲ್ಕವನ್ನು ೧ ರೂ. ಇದಿದ್ದನ್ನು ೨ ರೂ. ಗಳಿಗೆ ಏರಿಸಲಾಗಿದೆ.
ಆ ಮೂಲಕ ನೀರಿನ ತೆರಿಗೆಯನ್ನು ೩೨೭ ರೂ. ಗಳಿಗೆ ಏರಿಸಲಾಗಿದ್ದು, ಶೇ. ೧೦೦ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆ ಕಂಡಂತಾಗಿದೆ. ತಮ್ಮದು ಜನಪರ ಸರ್ಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ತವರು ಜಿಲ್ಲೆಯಲ್ಲಿ ದರ ಏರಿಕೆ ಪ್ರಹಾರಕ್ಕೆ ಜನರು ಕಂಗಾಲಾಗಿದ್ದರೂ ಇತ್ತ ಗಮನಹರಿಸದಿರುವುದು ಬೇಸರದ ಸಂಗತಿ. ಕೂಡಲೇ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ನೀರಿನ ದರ ಇಳಿಸುವಂತೆ ಪಾಲಿಕೆಗೆ ಸೂಚಿಸಬೇಕಿದೆ. -ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…