ಓದುಗರ ಪತ್ರ
ರಾಜ್ಯದಲ್ಲಿ ಇತ್ತೀಚೆಗೆ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದ್ದು, ಮೆಟ್ರೋ, ಬಸ್ ಪ್ರಯಾಣ ದರ, ಆಟೋ ಪ್ರಯಾಣ ದರ ಏರಿಕೆಯಿಂದಾಗಿ ಜನರು ಕಂಗಾಲಾಗಿರುವ ಬೆನ್ನಲ್ಲೇ ಮೈಸೂರಿಗರಿಗೆ ವಿದ್ಯುತ್, ಹಾಲಿನ ದರದ ಜತೆಗೆ ನೀರಿನ ದರ ಏರಿಕೆಯ ಚಿಂತೆಯೂ ಶುರುವಾಗಿದೆ.
ಮೈಸೂರು ಮಹಾನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿದೆ ಅನಿಸುತ್ತೆ. ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ಇತ್ತ ಮಹಾನಗರ ಪಾಲಿಕೆಯು ನೀರಿನ ತೆರಿಗೆಯನ್ನು ಹೆಚ್ಚಿಸಿದ್ದು, ಈ ಹಿಂದೆ ೧೬೪ ರೂ. ಗಳಿದ್ದ ನೀರಿನ ಶುಲ್ಕವನ್ನು ೨೫೦ ರೂ. ಗಳಿಗೆ ಏರಿಸಿದೆ. ಒಳಚರಂಡಿ ಶುಲ್ಕವನ್ನು ೩೮ ರೂ. ಗಳಿಂದ ೭೫ ರೂ. ಗಳಿಗೆ ಏರಿಸಿದೆ. ಇನ್ನು ಸೇವಾ ಶುಲ್ಕವನ್ನು ೧ ರೂ. ಇದಿದ್ದನ್ನು ೨ ರೂ. ಗಳಿಗೆ ಏರಿಸಲಾಗಿದೆ.
ಆ ಮೂಲಕ ನೀರಿನ ತೆರಿಗೆಯನ್ನು ೩೨೭ ರೂ. ಗಳಿಗೆ ಏರಿಸಲಾಗಿದ್ದು, ಶೇ. ೧೦೦ಕ್ಕೂ ಅಧಿಕ ಪ್ರಮಾಣದಲ್ಲಿ ಏರಿಕೆ ಕಂಡಂತಾಗಿದೆ. ತಮ್ಮದು ಜನಪರ ಸರ್ಕಾರ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ತಮ್ಮ ತವರು ಜಿಲ್ಲೆಯಲ್ಲಿ ದರ ಏರಿಕೆ ಪ್ರಹಾರಕ್ಕೆ ಜನರು ಕಂಗಾಲಾಗಿದ್ದರೂ ಇತ್ತ ಗಮನಹರಿಸದಿರುವುದು ಬೇಸರದ ಸಂಗತಿ. ಕೂಡಲೇ ಸಿದ್ದರಾಮಯ್ಯನವರು ಈ ಬಗ್ಗೆ ಗಮನಹರಿಸಿ ನೀರಿನ ದರ ಇಳಿಸುವಂತೆ ಪಾಲಿಕೆಗೆ ಸೂಚಿಸಬೇಕಿದೆ. -ವಿಜಯ್ ಹೆಮ್ಮಿಗೆ, ವಿಜಯನಗರ ರೈಲ್ವೆ ಬಡಾವಣೆ, ಮೈಸೂರು.
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…