ಓದುಗರ ಪತ್ರ

ಓದುಗರ ಪತ್ರ | ವನರಂಗದ ಬಯಲು ಮಂದಿರದ ಮೇಲ್ಭಾಗ ಮುಚ್ಚಲಿ

ಮೈಸೂರಿನ ಕರ್ನಾಟಕ ಕಲಾಮಂದಿರದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬಹುರೂಪಿ ನಾಟಕೋತ್ಸವ ನಡೆಯುತ್ತಿದೆ. ಸಿನಿಮಾ ವೀಕ್ಷಿಸಲು ಸಾರ್ವಜನಿಕರಿಗೆ ಉಚಿತ ಹಾಗೂ ನಾಟಕಕ್ಕೆ ಪ್ರತಿ ಟಿಕೆಟ್‌ಗೆ ರೂ. ೧೦೦ ದರ ನಿಗದಿ ಮಾಡಲಾಗಿದೆ. ಆದರೆ ಎಲ್ಲ ನಾಟಕಗಳೂ ಬಯಲು ಪ್ರದೇಶವಾದ ವನರಂಗದಲ್ಲಿ ಸಂಜೆ ೭ರಿಂದ ನಡೆಯುತ್ತವೆ.

ಈಗ ಚಳಿಗಾಲವಾದ್ದರಿಂದ ಟಿಕೆಟ್ ತೆಗೆದುಕೊಂಡವರು ಕನಿಷ್ಠ ಮೂರು ಗಂಟೆಗಳ ಕಾಲ ನಾಟಕವನ್ನು ವೀಕ್ಷಣೆ ಮಾಡಬೇಕಾಗುತ್ತದೆ. ಸಂಜೆ ಸಮಯದಲ್ಲಿ ಮಂಜು ಬೀಳುತ್ತಿರುತ್ತವೆ. ವಯಸ್ಸಾದವರು ಚಳಿಯಲ್ಲಿ ನಾಟಕ ವೀಕ್ಷಿಸುವುದು ತುಂಬಾ ಕಷ್ಟವಾಗುತ್ತದೆ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ವರ್ಷದಿಂದ ವನರಂಗದ ಬಯಲು ಮಂದಿರ ಮೇಲ್ಭಾಗವನ್ನು ತಾರಸಿ ಅಥವಾ ಕಲ್ನಾರ್ ಶೀಟ್‌ಗಳಿಂದ ಮುಚ್ಚಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
– ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

1 hour ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago