ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಅಡಿಯಲ್ಲಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಚರ್ಚಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರು ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಹೇಳಿರುವುದಾಗಿ ವರದಿಯಾಗಿದೆ.
ಇಲ್ಲಿಯವರೆಗೂ ನಡೆದಿರುವ ಎಲ್ಲ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಯಾವುದೇ ಅಭ್ಯರ್ಥಿಯು ಯಾವುದೇ ರಾಜಕೀಯ ಪಕ್ಷದ ಚಿಹ್ನೆಯ ಗುರುತಿನಡಿ ಸ್ಪಽಸಲು ಅವಕಾಶವಿರಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಬಳಸಿದರೆ ಅದು ಹಳ್ಳಿ ಜನರಲ್ಲಿ ರಾಜಕೀಯ ವೈಷಮ್ಯಕ್ಕೆ ಕಾರಣವಾಗಿ ಸಾಮರಸ್ಯ ಕದಡುತ್ತದೆ. ಇದೇ ಕಾರಣದಿಂದ ಈವರೆಗೂ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆಗಳ ಬಳಕೆಗೆ ಅವಕಾಶ ನೀಡಿಲ್ಲ. ಆದ್ದರಿಂದ ಸರ್ಕಾರ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ತರುವುದು ಸೂಕ್ತವಲ್ಲ. ಚುನಾವಣೆಗಳಿಗೆ ರಾಜಕೀಯ ಪಕ್ಷಗಳ ಬೆಂಬಲ ಇರಲಿ. ಆದರೆ ಚಿಹ್ನೆಗಳ ಬಳಕೆ ಬೇಡ. -ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…