ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವದ ಜನಪ್ರಿಯ ಕಾರ್ಯಕ್ರಮಗಳಲ್ಲಿ ಕವಿಗೋಷ್ಠಿಯೂ ಒಂದು . ಈ ಹಿಂದೆ ಎಲ್ಲ ಚಿಗುರು ಕವಿಗೋಷ್ಠಿ , ಅರಳು ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಹಾಸ್ಯಗೋಷ್ಠಿ, ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ ಇರುತ್ತಿದ್ದವು. ಇವುಗಳಲ್ಲಿ ಚುಟುಕು ಕವಿಗೋಷ್ಠಿ ಪ್ರಮುಖ ವಾದ ಆಕರ್ಷಣೆಯ ಗೋಷ್ಠಿಯಾಗಿತ್ತು. ಈ ಬಾರಿ ದಸರಾ ಕಾವ್ಯ ಸಂಭ್ರಮ ಶೀರ್ಷಿಕೆಯಡಿ ಯುವ ಕವಿಗೋಷ್ಠಿ, ಪ್ರಧಾನ ಕವಿಗೋಷ್ಠಿ, ಹಾಸ್ಯ ಕವಿಗೋಷ್ಠಿ, ಸೆ.೨೮ರಿಂದ ಅ.೩ರವರೆಗೆ ನಡೆಯಲಿದೆ ಎಂದು ಕವಿಗೋಷ್ಠಿ ಸಮಿತಿಯವರು ತಿಳಿಸಿದ್ದಾರೆ . ಆದರೆ ಚುಟುಕು ಕವಿಗೋಷ್ಠಿಯನ್ನು ರದ್ದು ಮಾಡಲಾಗಿದೆ. ಇದರಿಂದ ಚುಟುಕು ಪ್ರಿಯರಿಗೆ ನಿರಾಸೆಯಾಗಿದೆ . ಚುಟುಕು ಸಾಹಿತ್ಯದಲ್ಲಿ ಬದುಕಿನ ಲಾಲಿತ್ಯವಿದೆ. ಚುಟುಕು ಕವಿಗೋಷ್ಠಿ ಆರಂಭಿಸುವುದರಿಂದ ದಸರೆಗೂ ಕಳೆ ಬರಲಿದೆ. ಆದ್ದರಿಂದ ಕವಿಗೋಷ್ಠಿ ಸಮಿತಿಯವರು ಈ ಬಾರಿಯ ದಸರಾ ಮಹೋತ್ಸವದಲ್ಲಿ ಚುಟುಕು ಕವಿಗೋಷ್ಠಿಗೆ ಅವಕಾಶ ಕಲ್ಪಿಸಬೇಕು.
–ಅಹಲ್ಯ ಸಿ.ನಾ.ಚಂದ್ರ, ಜನತಾ ನಗರ, ಮೈಸೂರು
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…