ಓದುಗರ ಪತ್ರ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಖಾಸಗೀಕರಣದ ಭಯದಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ೧೧,೪೪೦ ಕೋಟಿ ರೂ. ಅನುದಾನ ನೀಡಿದೆ. ಇದೊಂದು ಶ್ಲಾಘನೀಯ ಕ್ರಮ.
ಆದರೆ, ಈ ಕ್ರಮ ಖಾಸಗೀಕರಣದ ಭಯದಲ್ಲಿರುವ ಕರ್ನಾಟಕದ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆ ಕುರಿತಾಗಿ ಏಕಿಲ್ಲ? ವಿಪರ್ಯಾಸವೆಂದರೆ ಈ ಬಾರಿ ಕರ್ನಾಟಕದ ಎಚ್. ಡಿ. ಕುಮಾರಸ್ವಾಮಿ ಯವರೇ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿದ್ದರೂ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಾಗದಿರುವುದು ಆಶ್ಚರ್ಯಕರ ಸಂಗತಿ. ಕೇಂದ್ರ ಸರ್ಕಾರದ ಈ ಪಕ್ಷಪಾತ ನೀತಿಯನ್ನು ಸಚಿವ ಕುಮಾರಸ್ವಾಮಿಯವರು ಸಮರ್ಥಿಸಿಕೊಳ್ಳುತ್ತಾರೋ ಅಥವಾ ರಾಜ್ಯ ಸರ್ಕಾರವನ್ನು ದೂಷಿಸುತ್ತಾರೋ ತಿಳಿಯದು.
ಕೇಂದ್ರ ಸರ್ಕಾರವು ಕರ್ನಾಟಕದ ಬಗೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಯನ್ನು ಲೇವಡಿ ಮಾಡುವವರು ಇದಕ್ಕೆ ಏನು ಹೇಳುತ್ತಾರೆ? -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…