ಓದುಗರ ಪತ್ರ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಖಾಸಗೀಕರಣದ ಭಯದಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ೧೧,೪೪೦ ಕೋಟಿ ರೂ. ಅನುದಾನ ನೀಡಿದೆ. ಇದೊಂದು ಶ್ಲಾಘನೀಯ ಕ್ರಮ.
ಆದರೆ, ಈ ಕ್ರಮ ಖಾಸಗೀಕರಣದ ಭಯದಲ್ಲಿರುವ ಕರ್ನಾಟಕದ ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆ ಕುರಿತಾಗಿ ಏಕಿಲ್ಲ? ವಿಪರ್ಯಾಸವೆಂದರೆ ಈ ಬಾರಿ ಕರ್ನಾಟಕದ ಎಚ್. ಡಿ. ಕುಮಾರಸ್ವಾಮಿ ಯವರೇ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿದ್ದರೂ ಭದ್ರಾವತಿಯ ಉಕ್ಕಿನ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸಾಧ್ಯವಾಗದಿರುವುದು ಆಶ್ಚರ್ಯಕರ ಸಂಗತಿ. ಕೇಂದ್ರ ಸರ್ಕಾರದ ಈ ಪಕ್ಷಪಾತ ನೀತಿಯನ್ನು ಸಚಿವ ಕುಮಾರಸ್ವಾಮಿಯವರು ಸಮರ್ಥಿಸಿಕೊಳ್ಳುತ್ತಾರೋ ಅಥವಾ ರಾಜ್ಯ ಸರ್ಕಾರವನ್ನು ದೂಷಿಸುತ್ತಾರೋ ತಿಳಿಯದು.
ಕೇಂದ್ರ ಸರ್ಕಾರವು ಕರ್ನಾಟಕದ ಬಗೆಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಯನ್ನು ಲೇವಡಿ ಮಾಡುವವರು ಇದಕ್ಕೆ ಏನು ಹೇಳುತ್ತಾರೆ? -ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…