ಚಿಕ್ಕ ವಯಸ್ಸಿನ ಮಕ್ಕಳು ಸ್ಮಾರ್ಟ್ಫೋನ್ಗಳಿಗೆ ಜೋತುಬಿದ್ದು, ಸೋಷಿ ಯಲ್ ಮೀಡಿಯಾಗಳಲ್ಲಿ, ಗೇಮ್ಸ್ ಆಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಈ ಸ್ಮಾರ್ಟ್ಫೋನ್ಗಳ ಬಳಕೆಯಿಂದಾಗಿ ಮಕ್ಕಳು ಹೊರಾಂಗಣ ಕ್ರೀಡೆಗಳನ್ನು ಮರೆತಿರುವುದಲ್ಲದೆ ಕನಿಷ್ಠ ಒಂದು ಗಂಟೆಯಾದರೂ ಪುಸ್ತಕ ಹಿಡಿದು ಓದುವಷ್ಟು ತಾಳ್ಮೆ ಅವರಲ್ಲಿ ಇಲ್ಲದಂತಾಗಿದೆ.
ಮಕ್ಕಳಲ್ಲಿ ಓದುವ ಹವ್ಯಾಸವನ್ನು ರೂಢಿಸುವುದಕ್ಕಾಗಿ ರಾಜ್ಯದ ಶಾಲಾ ಶಿಕ್ಷಣ ಇಲಾಖೆ ‘ಓದುವ ಹವ್ಯಾಸ ಜ್ಞಾನದ ವಿಕಾಸ’ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಕೋವಿಡ್ ಸಂಕಷ್ಟದ ಕಾಲದಲ್ಲಿ ಶಾಲಾ-ಕಾಲೇಜುಗಳು ತಿಂಗಳಾನುಗಟ್ಟಲೆ ಬಂದ್ ಆಗಿದ್ದವು. ಆಗ ಮಕ್ಕಳಿಗೆ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿತ್ತು.
ಆ ಪರಿಪಾಟ ಅಭ್ಯಾಸವಾಗಿ ಹೋಗಿ ಮಕ್ಕಳು ಈ ಸ್ಮಾರ್ಟ್ಫೋನ್ ಗಳಿಗೆ ಜೋತುಬಿದ್ದಿದ್ದಾರೆ. ಈಗ ಶಾಲೆಗಳಲ್ಲಿ ತರಗತಿಗಳು ನಡೆಯುತ್ತಿದ್ದರೂ ಮಕ್ಕಳು ಮಾತ್ರ ಸ್ಮಾರ್ಟ್ ಫೋನ್ಗಳನ್ನು ಬಿಟ್ಟು ಹೊರಬಂದಿಲ್ಲ. ಇವೆಲ್ಲವನ್ನು ಮನಗಂಡ ವಿಶ್ವಸಂಸ್ಥೆಯು ೬ ರಿಂದ ೧೦ ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ನಲ್ಲಿ ಕಲಿಕೆ ಸರಿಯಲ್ಲ ಎಂದು ಶಿಫಾರಸ್ಸು ಮಾಡಿದ್ದು, ಸರ್ಕಾರವೂ ಈ ವಿನೂತನ ಯೋಜನೆಯನ್ನು ರೂಪಿಸಿ ಪ್ರತಿ ಶಾಲೆಯಲ್ಲಿಯೂ ಗ್ರಂಥಾಲಯವಿರಬೇಕು ಮತ್ತು ೧ರಿಂದ ೧೦ನೇ ತರಗತಿಯವರೆಗಿನ ಮಕ್ಕಳು ಗ್ರಂಥಾಲಯಗಳಲ್ಲಿ ಓದಬೇಕು ಎಂದು ಕಡ್ಡಾಯಗೊಳಿಸಿದೆ. ಇದು ಮಕ್ಕಳಿಗೆ ಓದುವ ಹವ್ಯಾಸವನ್ನು ರೂಢಿಸಲು ಸಹಕಾರಿಯಾಗಿದೆ.
-ಕೆ. ಎಸ್. ಸುರೇಶ್, ಮುಖ್ಯ ಶಿಕ್ಷಕರು, ಸರಗೂರು.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…