ಓದುಗರ ಪತ್ರ

ಓದುಗರ ಪತ್ರ| ಇದು ಕನ್ನಡಕ್ಕೆ ಮಾಡಿದ ಅಪಮಾನ

ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ್ದು, ಕನ್ನಡದಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿರಾಕರಿಸುವುದಾಗಿ ಆದೇಶಿಸಿರುವುದು ಕನ್ನಡಿಗರಿಗೆ ಮಾಡಿದ ಅಪಮಾನವಾಗಿದೆ.

ರೈಲ್ವೆ ಇಲಾಖೆಯ ಎಲ್ಲ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿಯೂ ನಡೆಸಲು ರೈಲ್ವೆ ಇಲಾಖೆ ತಯಾರಿ ಮಾಡಿಕೊಳ್ಳುತ್ತಿದೆ. ಅಲ್ಲದೆ ಪ್ರಾದೇಶಿಕ ಹುದ್ದೆಗಳ ನೇಮಕಾತಿಯಲ್ಲಿಯೂ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಬೇಕು ಎಂಬುದಿದೆ. ಇಷ್ಟಿದ್ದರೂ ನೈಋತ್ಯ ರೈಲ್ವೆ ವಲಯದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕನ್ನಡದಲ್ಲಿ ಅರ್ಜಿಸಲ್ಲಿಸಿದರೆ ಅವುಗಳನ್ನು ತಿರಸ್ಕರಿಸುವುದಾಗಿ ರೈಲ್ವೆ ಅಧಿಕಾರಿಗಳು ಆದೇಶಿಸಿದ್ದು, ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿರುವುದು ನಿಜಕ್ಕೂ ಖಂಡನೀಯ.

ಇತ್ತೀಚೆಗೆ ಮೈಸೂರಿಗೆ ಭೇಟಿ ನೀಡಿದ್ದ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ರೈಲ್ವೆ ಇಲಾಖೆಯ ಎಲ್ಲ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ನೀಡಲಾಗುವುದು ಎನ್ನುವುದರ ಜತೆಗೆ ಎಲ್ಲ ಅಧಿಕಾರಿಗಳೂ ಆದಷ್ಟು ಬೇಗ ಕನ್ನಡ ಕಲಿತು ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ಸೂಚಿಸಿದ್ದರು. ಆದರೆ ಕನ್ನಡದಲ್ಲಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸುವ ಮೂಲಕ ಕನ್ನಡ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಸರಿಯಲ್ಲ. ವಿ.ಸೋಮಣ್ಣನವರು ಈ ಬಗ್ಗೆ ಗಮನಹರಿಸಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕಿದೆ.

-ಮಗು ಸದಾನಂದಯ್ಯ, ಅಧ್ಯಕ್ಷರು, ಕನ್ನಡ ಕ್ರಿಯಾ ಸಮಿತಿ ಹಾಗೂ ಶರಣ ಸಾಹಿತ್ಯ ಪರಿಷತ್, ಮೈಸೂರು ನಗರ ಘಟಕ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

9 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

10 mins ago

ಓದುಗರ ಪತ್ರ: ತಂತ್ರಜ್ಞಾನಾಧಾರಿತ ನ್ಯೂಟ್ರಿ ಸ್ಕೋರ್ ಜಾರಿಗೆ ತನ್ನಿ

ದೇಶದಲ್ಲಿ ೪೦ ಕೋಟಿಗೂ ಹೆಚ್ಚು ಮಂದಿ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಿಂದ ಬಳಲುತ್ತಿದ್ದರೂ ಜಂಕ್ ಫುಡ್ ಕಂಪೆನಿಗಳು ಪೌಷ್ಟಿಕಾಂಶದ ವಿವರಗಳನ್ನು…

12 mins ago

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago