ಓದುಗರ ಪತ್ರ

ಓದುಗರ ಪತ್ರ: ಮಹನೀಯರ ಪ್ರತಿಮೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಿ

ಮಹನೀಯರ ಪುತ್ತಳಿ ಹಾಗೂ ಪ್ರತಿಮೆ ಬಳಿ ಸಿಸಿ ಕ್ಯಾಮೆರಾ ಅಳವಡಿಸಿ ಅಹಿತಕರ ಘಟನೆ ತಡೆಗಟ್ಟುವ ಬಗ್ಗೆ ಕ್ರಮ ವಹಿಸುವುದು ಅತ್ಯಗತ್ಯ. ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅನೇಕ ಮಹನೀಯರು ಹೋರಾಟ ನಡೆಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಭಗವಾನ್ ಬುದ್ಧ, ಬಸವಣ್ಣ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಕನಕದಾಸರು ಸೇರಿದಂತೆ ಅನೇಕ ಮಹನೀಯರ ಹೋರಾಟದ ಬದುಕಿನ ಸಂದೇಶವನ್ನು ಸಮಾಜಕ್ಕೆ ಸಾರುವ ಸದುದ್ದೇಶದಿಂದ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಪ್ರತಿಮೆಗಳು ಮತ್ತು ಪುತ್ತಳಿಗಳನ್ನು ನಿರ್ಮಿಸಲಾಗಿದೆ.

ಆದರೆ, ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆ ಒಳಗೊಂಡಂತೆ ಹಲವು ಜಿಲ್ಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸೇರಿದಂತೆ ಅನೇಕ ಮಹನೀಯರ ಪ್ರತಿಮೆಗಳನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆಯುತ್ತಿದ್ದಾರೆ. ಇವರ ಪೈಶಾಚಿಕ ಕೃತ್ಯದಿಂದಾಗಿ ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟಾಗುತ್ತಿದೆ. ಎರಡು ಕೋಮುಗಳ ನಡುವೆ ಹಾಗೂ ಜಾತಿ-ಜಾತಿಗಳ ನಡುವೆ ವೈಷಮ್ಯ ಮೂಡಿ ಪರಸ್ಪರ ಗೌರವ ಕಡಿಮೆಯಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.

ಈ ಕೃತ್ಯವನ್ನು ತಡೆಗಟ್ಟಲು ಹಾಗೂ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಅನೇಕ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಅಲ್ಲದೆ, ಇಂತಹ ಅಹಿತಕರ ಘಟನೆ ನಡೆದ ಪ್ರದೇಶಗಳಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವಾತಾವರಣ ಸೃಷ್ಟಿಯಾಗುತ್ತಿದ್ದು, ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕುವುದು ಇಂದಿನ ತುರ್ತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಾಂತ ಸ್ಥಾಪಿಸಿರುವ ಹಲವು ಮಹನೀಯರ ಪುತ್ತಳಿ, ಪ್ರತಿಮೆ ಎದುರು ಸಿಸಿ ಕ್ಯಾಮೆರಾವನ್ನು ಅಳವಡಿಸಿ ಜೀಯೋ ಟ್ಯಾಗಿಂಗ್ ವ್ಯವಸ್ಥೆ ಕಲ್ಪಿಸುವುದು ಅವಶ್ಯವಾಗಿದೆ.

ಅದರ ಉಸ್ತುವಾರಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ವಹಿಸಿ, ಉನ್ನತ ಪೊಲೀಸ್ ಅಧಿಕಾರಿಗಳು ನಿಗಾವಹಿಸುವುದು ಸೂಕ್ತವಾಗಿರುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯು ಮುಂಬೈ ಪೊಲೀಸ್ ಮಾದರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ನಿಗಾವಹಿಸುವ ಮೂಲಕ ಇಂತಹ ಅಹಿತಕರ ಘಟನೆ ಸಂಭವಿಸದಂತೆ ತಡೆಗಟ್ಟಿ ಸಮುದಾಯಗಳ ನಡುವಿನ ಸಾಮರಸ್ಯ ಕಾಪಾಡುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮ ಕೈಗೊಳ್ಳಬೇಕಿದೆ.

– ಕೆ.ಶಿವಕುಮಾರ್, ಹಿರಿಯ ಪತ್ರಕರ್ತಕರು, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago