ಓದುಗರ ಪತ್ರ

ಓದುಗರ ಪತ್ರ: ಮಹನೀಯರ ಪ್ರತಿಮೆಗಳಿಗೆ ಸಿಸಿ ಕ್ಯಾಮರಾ ಅಳವಡಿಸಿ

ಮಹನೀಯರ ಪುತ್ತಳಿ ಹಾಗೂ ಪ್ರತಿಮೆ ಬಳಿ ಸಿಸಿ ಕ್ಯಾಮೆರಾ ಅಳವಡಿಸಿ ಅಹಿತಕರ ಘಟನೆ ತಡೆಗಟ್ಟುವ ಬಗ್ಗೆ ಕ್ರಮ ವಹಿಸುವುದು ಅತ್ಯಗತ್ಯ. ಸಮಾಜ ಸುಧಾರಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಅನೇಕ ಮಹನೀಯರು ಹೋರಾಟ ನಡೆಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಭಗವಾನ್ ಬುದ್ಧ, ಬಸವಣ್ಣ, ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್, ಕನಕದಾಸರು ಸೇರಿದಂತೆ ಅನೇಕ ಮಹನೀಯರ ಹೋರಾಟದ ಬದುಕಿನ ಸಂದೇಶವನ್ನು ಸಮಾಜಕ್ಕೆ ಸಾರುವ ಸದುದ್ದೇಶದಿಂದ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಪ್ರತಿಮೆಗಳು ಮತ್ತು ಪುತ್ತಳಿಗಳನ್ನು ನಿರ್ಮಿಸಲಾಗಿದೆ.

ಆದರೆ, ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆ ಒಳಗೊಂಡಂತೆ ಹಲವು ಜಿಲ್ಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸೇರಿದಂತೆ ಅನೇಕ ಮಹನೀಯರ ಪ್ರತಿಮೆಗಳನ್ನು ವಿರೂಪಗೊಳಿಸಿ ಕಿಡಿಗೇಡಿಗಳು ವಿಕೃತಿ ಮೆರೆಯುತ್ತಿದ್ದಾರೆ. ಇವರ ಪೈಶಾಚಿಕ ಕೃತ್ಯದಿಂದಾಗಿ ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟಾಗುತ್ತಿದೆ. ಎರಡು ಕೋಮುಗಳ ನಡುವೆ ಹಾಗೂ ಜಾತಿ-ಜಾತಿಗಳ ನಡುವೆ ವೈಷಮ್ಯ ಮೂಡಿ ಪರಸ್ಪರ ಗೌರವ ಕಡಿಮೆಯಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.

ಈ ಕೃತ್ಯವನ್ನು ತಡೆಗಟ್ಟಲು ಹಾಗೂ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಅನೇಕ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಅಲ್ಲದೆ, ಇಂತಹ ಅಹಿತಕರ ಘಟನೆ ನಡೆದ ಪ್ರದೇಶಗಳಲ್ಲಿ ಬೂದಿ ಮುಚ್ಚಿದ ಕೆಂಡದಂತೆ ವಾತಾವರಣ ಸೃಷ್ಟಿಯಾಗುತ್ತಿದ್ದು, ಇಂತಹ ಕುಕೃತ್ಯಗಳಿಗೆ ಕಡಿವಾಣ ಹಾಕುವುದು ಇಂದಿನ ತುರ್ತಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಾಂತ ಸ್ಥಾಪಿಸಿರುವ ಹಲವು ಮಹನೀಯರ ಪುತ್ತಳಿ, ಪ್ರತಿಮೆ ಎದುರು ಸಿಸಿ ಕ್ಯಾಮೆರಾವನ್ನು ಅಳವಡಿಸಿ ಜೀಯೋ ಟ್ಯಾಗಿಂಗ್ ವ್ಯವಸ್ಥೆ ಕಲ್ಪಿಸುವುದು ಅವಶ್ಯವಾಗಿದೆ.

ಅದರ ಉಸ್ತುವಾರಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ವಹಿಸಿ, ಉನ್ನತ ಪೊಲೀಸ್ ಅಧಿಕಾರಿಗಳು ನಿಗಾವಹಿಸುವುದು ಸೂಕ್ತವಾಗಿರುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯು ಮುಂಬೈ ಪೊಲೀಸ್ ಮಾದರಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ನಿಗಾವಹಿಸುವ ಮೂಲಕ ಇಂತಹ ಅಹಿತಕರ ಘಟನೆ ಸಂಭವಿಸದಂತೆ ತಡೆಗಟ್ಟಿ ಸಮುದಾಯಗಳ ನಡುವಿನ ಸಾಮರಸ್ಯ ಕಾಪಾಡುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮ ಕೈಗೊಳ್ಳಬೇಕಿದೆ.

– ಕೆ.ಶಿವಕುಮಾರ್, ಹಿರಿಯ ಪತ್ರಕರ್ತಕರು, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

2 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

2 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

7 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

7 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

7 hours ago