ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ರೈಲು ರಾತ್ರಿ ಮೈಸೂರು ತಲುಪುವುದು ೧ ಗಂಟೆಯಾಗುತ್ತಿದೆ.
ಈ ಮೊದಲು ಸಂಜೆ ೪ ಗಂಟೆಗೆ ಶಿವಮೊಗ್ಗ ನಿಲ್ದಾಣ ಬಿಡುತ್ತಿದ್ದ ರೈಲು ರಾತ್ರಿ ೧೦ ಗಂಟೆ ಯೊಳಗೆ ಮೈಸೂರನ್ನು ತಲುಪುತ್ತಿತ್ತು. ಆದರೆ ಸಮಯವನ್ನು ಸಂಜೆ ೪. ೪೫ಕ್ಕೆ ಬದಲಾಯಿಸಿದ ನಂತರ ಒಂದಿಲ್ಲೊಂದು ಸಮಸ್ಯೆಯಿಂದಾಗಿ ರೈಲು ಮೈಸೂರು ತಲುಪುವುದು ತಡವಾಗುತ್ತಿರುವುದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ. ಸಂಸದರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಕಾಲಕ್ಕೆ ರೈಲು ಮೈಸೂರು ತಲುಪಲು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ. -ವಾರುಣಿ, ಮೈಸೂರು
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…