ಶಿವಮೊಗ್ಗದಿಂದ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಮೈಸೂರು ಇಂಟರ್ ಸಿಟಿ ಎಕ್ಸ್ಪ್ರೆಸ್ (೧೬೨೦೫)ರೈಲು ಪ್ರತಿನಿತ್ಯ ಸಂಜೆ ೪. ೫೦ಕ್ಕೆ ಶಿವಮೊಗ್ಗದಿಂದ ಹೊರಟು ರಾತ್ರಿ ೧೦. ೩೦ಕ್ಕೆ ಮೈಸೂರು ತಲುಪುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಮತ್ತಿತರ ಕಾರಣಗಳಿಂದಾಗಿ ರೈಲು ರಾತ್ರಿ ಮೈಸೂರು ತಲುಪುವುದು ೧ ಗಂಟೆಯಾಗುತ್ತಿದೆ.
ಈ ಮೊದಲು ಸಂಜೆ ೪ ಗಂಟೆಗೆ ಶಿವಮೊಗ್ಗ ನಿಲ್ದಾಣ ಬಿಡುತ್ತಿದ್ದ ರೈಲು ರಾತ್ರಿ ೧೦ ಗಂಟೆ ಯೊಳಗೆ ಮೈಸೂರನ್ನು ತಲುಪುತ್ತಿತ್ತು. ಆದರೆ ಸಮಯವನ್ನು ಸಂಜೆ ೪. ೪೫ಕ್ಕೆ ಬದಲಾಯಿಸಿದ ನಂತರ ಒಂದಿಲ್ಲೊಂದು ಸಮಸ್ಯೆಯಿಂದಾಗಿ ರೈಲು ಮೈಸೂರು ತಲುಪುವುದು ತಡವಾಗುತ್ತಿರುವುದರಿಂದ ಮಹಿಳೆಯರು ಮತ್ತು ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ. ಸಂಸದರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಕಾಲಕ್ಕೆ ರೈಲು ಮೈಸೂರು ತಲುಪಲು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ. -ವಾರುಣಿ, ಮೈಸೂರು
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…