ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿ ರುವ ದೇವನೂರ ಮಹಾದೇವರವರಿಗೆ ಲಭಿಸಿ ರುವುದು ಹೆಮ್ಮೆಯ ವಿಚಾರ.
ಕೇರಳದ ವೈಕಂನಲ್ಲಿ ಪೆರಿಯಾರ್ರವರ ನೇತೃತ್ವದಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ವೈಕಂ ಸತ್ಯಾಗ್ರಹ ನೂರು ವರ್ಷಗಳನ್ನು ಪೂರೈಸಿದ ನೆನಪಿನಾರ್ಥ ಈ ಪ್ರಶಸ್ತಿಯನ್ನು ತಮಿಳುನಾಡು ಸರ್ಕಾರ ನೀಡಿದೆ.
ಅಂದು ಯಾವ ದೇವಸ್ಥಾನದ ಪ್ರವೇಶಕ್ಕಾಗಿ ವೈಕಂನಲ್ಲಿ ಹೋರಾಟ ನಡೆದಿತ್ತೋ ಅದೇ ದೇವಸ್ಥಾನದ ಪಕ್ಕದಲ್ಲಿ ಇಂದು ವೈಕಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರುವುದು ಹೆಮ್ಮೆಯ ವಿಚಾರ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುವವರನ್ನು ಗುರುತಿಸಿ ಅವರಿಗೆ ನೀಡುವ ಪ್ರಶಸ್ತಿಯಾ ಗಿದ್ದು, ಕರ್ನಾಟಕದ ಹಿರಿಯ ಸಾಹಿತಿ ದೇವನೂರ ಮಹಾದೇವರವರು ಭಾಜನರಾಗಿರುವುದು ಮೂರೂ ರಾಜ್ಯಗಳನ್ನು ಒಗ್ಗೂಡಿಸಿದಂತಾಗಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…