ಕೇರಳದ ವೈಕಂನಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ಹೋರಾಟದ ನೆನಪಿನಾರ್ಥ ತಮಿಳುನಾಡು ಸರ್ಕಾರ ಕೊಡಮಾಡುವ ೨೦೨೪ನೇ ಸಾಲಿನ ‘ವೈಕಂ ಪ್ರಶಸ್ತಿ’ಯು ಕರ್ನಾಟಕದ ಹೆಸರಾಂತ ಸಾಹಿತಿ, ತಳಸಮುದಾಯಗಳ ಏಳಿಗೆಗಾಗಿ ಶ್ರಮಿಸುತ್ತಿ ರುವ ದೇವನೂರ ಮಹಾದೇವರವರಿಗೆ ಲಭಿಸಿ ರುವುದು ಹೆಮ್ಮೆಯ ವಿಚಾರ.
ಕೇರಳದ ವೈಕಂನಲ್ಲಿ ಪೆರಿಯಾರ್ರವರ ನೇತೃತ್ವದಲ್ಲಿ ಅಸ್ಪೃಶ್ಯತೆ ಆಚರಣೆಯ ವಿರುದ್ಧ ನಡೆದ ವೈಕಂ ಸತ್ಯಾಗ್ರಹ ನೂರು ವರ್ಷಗಳನ್ನು ಪೂರೈಸಿದ ನೆನಪಿನಾರ್ಥ ಈ ಪ್ರಶಸ್ತಿಯನ್ನು ತಮಿಳುನಾಡು ಸರ್ಕಾರ ನೀಡಿದೆ.
ಅಂದು ಯಾವ ದೇವಸ್ಥಾನದ ಪ್ರವೇಶಕ್ಕಾಗಿ ವೈಕಂನಲ್ಲಿ ಹೋರಾಟ ನಡೆದಿತ್ತೋ ಅದೇ ದೇವಸ್ಥಾನದ ಪಕ್ಕದಲ್ಲಿ ಇಂದು ವೈಕಂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರುವುದು ಹೆಮ್ಮೆಯ ವಿಚಾರ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ದುಡಿಯುವವರನ್ನು ಗುರುತಿಸಿ ಅವರಿಗೆ ನೀಡುವ ಪ್ರಶಸ್ತಿಯಾ ಗಿದ್ದು, ಕರ್ನಾಟಕದ ಹಿರಿಯ ಸಾಹಿತಿ ದೇವನೂರ ಮಹಾದೇವರವರು ಭಾಜನರಾಗಿರುವುದು ಮೂರೂ ರಾಜ್ಯಗಳನ್ನು ಒಗ್ಗೂಡಿಸಿದಂತಾಗಿದೆ. -ಪಿ. ಸಿ. ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…
ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ…
ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ…
ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ…