ಓದುಗರ ಪತ್ರ

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ – ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ ನಾಗರಿಕರು ಹಾಗೂ ವಿವಿಧ ವಯೋಮಾನದವರು ಮುಂಜಾನೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡುತ್ತಾರೆ. ಎರಡು ಮೂರು ಮಂದಿ ಗುಂಪಿನಲ್ಲಿ ಮಾತನಾಡಿಕೊಂಡು ವಾಯುವಿಹಾರ ಮಾಡುವಾಗ ರಸ್ತೆಯಲ್ಲಿದ್ದೇವೆ ಎಂಬುದನ್ನೇ ಮರೆಯುತ್ತಾರೆ. ಕೆಲವು ಸಂದರ್ಭದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೂ ದಾರಿ ಬಿಡುವುದಿಲ್ಲ.

ಇದನ್ನೂ ಓದಿ:-ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಕೆಲವು ವಾಹನ ಸವಾರರು ಮದ್ಯಪಾನ ಮಾಡಿ ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ಪಾದಚಾರಿಗಳು ನಿಯಮ ಪಾಲಿಸದೇ ರಸ್ತೆಯ ಮೇಲೆ ನಡೆಯುತ್ತಿದ್ದರೆ ಪರಿಹಾರವೂ ಸಿಗುವುದಿಲ್ಲ. ರಸ್ತೆಯಲ್ಲಿ ವಾಯುವಿಹಾರ ಮಾಡುವುದಕ್ಕಿಂತ ಉದ್ಯಾನವನ ಸ್ಥಳಗಳಲ್ಲಿ, ಸ್ವಚ್ಛತೆಯಿಂದ ಕೂಡಿರುವ ವಿಶಾಲ ಮೈದಾನಗಳಲ್ಲಿ ವಾಯುವಿಹಾರ ಮಾಡುವುದು ಸೂಕ್ತ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶಿವಾಜಿ ಮುಸ್ಲಿಂರ ವಿರೋಧಿಯಾಗಿರಲಿಲ್ಲ :ಸಚಿವ ಕಾರ್ಮಿಕ ಸಂತೋಷ ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

31 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು : ಸಂಸದ ಯದುವೀರ್‌

ಮೈಸೂರು : ‘ಹಳೆಯ ಮೈಸೂರು ರಕ್ಷಣೆಯ ನಿಟ್ಟಿನಲ್ಲಿ ಕಾಲಕಾಲಕ್ಕೆ ಸೂಕ್ತ ಕ್ರಮ ವಹಿಸಬೇಕು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೂ ಆದ್ಯತೆ ನೀಡಬೇಕು.…

1 hour ago

ಬಾಲವಿಕಾಸ ಅಕಾಡೆಮಿಯ ಬಾಲಗೌರವ ಪ್ರಶಸ್ತಿ : ಮೈಸೂರಿನ ತಬಲಾ ಬಾಲ ಪ್ರತಿಭೆ ಪಂಚಮಿ ಬಿದನೂರು ಸೇರಿದಂತೆ ಅನೇಕರಿಗೆ ಪ್ರಶಸ್ತಿ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ಉತ್ತರ ಪ್ರವೇಶ ದ್ವಾರದ ಬಳಿ ಇರುವ…

1 hour ago

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

3 hours ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

4 hours ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

6 hours ago