ಓದುಗರ ಪತ್ರ

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ – ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ ನಾಗರಿಕರು ಹಾಗೂ ವಿವಿಧ ವಯೋಮಾನದವರು ಮುಂಜಾನೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡುತ್ತಾರೆ. ಎರಡು ಮೂರು ಮಂದಿ ಗುಂಪಿನಲ್ಲಿ ಮಾತನಾಡಿಕೊಂಡು ವಾಯುವಿಹಾರ ಮಾಡುವಾಗ ರಸ್ತೆಯಲ್ಲಿದ್ದೇವೆ ಎಂಬುದನ್ನೇ ಮರೆಯುತ್ತಾರೆ. ಕೆಲವು ಸಂದರ್ಭದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೂ ದಾರಿ ಬಿಡುವುದಿಲ್ಲ.

ಇದನ್ನೂ ಓದಿ:-ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಕೆಲವು ವಾಹನ ಸವಾರರು ಮದ್ಯಪಾನ ಮಾಡಿ ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ಪಾದಚಾರಿಗಳು ನಿಯಮ ಪಾಲಿಸದೇ ರಸ್ತೆಯ ಮೇಲೆ ನಡೆಯುತ್ತಿದ್ದರೆ ಪರಿಹಾರವೂ ಸಿಗುವುದಿಲ್ಲ. ರಸ್ತೆಯಲ್ಲಿ ವಾಯುವಿಹಾರ ಮಾಡುವುದಕ್ಕಿಂತ ಉದ್ಯಾನವನ ಸ್ಥಳಗಳಲ್ಲಿ, ಸ್ವಚ್ಛತೆಯಿಂದ ಕೂಡಿರುವ ವಿಶಾಲ ಮೈದಾನಗಳಲ್ಲಿ ವಾಯುವಿಹಾರ ಮಾಡುವುದು ಸೂಕ್ತ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago