ಓದುಗರ ಪತ್ರ

ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ – ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ ನಾಗರಿಕರು ಹಾಗೂ ವಿವಿಧ ವಯೋಮಾನದವರು ಮುಂಜಾನೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡುತ್ತಾರೆ. ಎರಡು ಮೂರು ಮಂದಿ ಗುಂಪಿನಲ್ಲಿ ಮಾತನಾಡಿಕೊಂಡು ವಾಯುವಿಹಾರ ಮಾಡುವಾಗ ರಸ್ತೆಯಲ್ಲಿದ್ದೇವೆ ಎಂಬುದನ್ನೇ ಮರೆಯುತ್ತಾರೆ. ಕೆಲವು ಸಂದರ್ಭದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೂ ದಾರಿ ಬಿಡುವುದಿಲ್ಲ.

ಇದನ್ನೂ ಓದಿ:-ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ

ಕೆಲವು ವಾಹನ ಸವಾರರು ಮದ್ಯಪಾನ ಮಾಡಿ ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ಪಾದಚಾರಿಗಳು ನಿಯಮ ಪಾಲಿಸದೇ ರಸ್ತೆಯ ಮೇಲೆ ನಡೆಯುತ್ತಿದ್ದರೆ ಪರಿಹಾರವೂ ಸಿಗುವುದಿಲ್ಲ. ರಸ್ತೆಯಲ್ಲಿ ವಾಯುವಿಹಾರ ಮಾಡುವುದಕ್ಕಿಂತ ಉದ್ಯಾನವನ ಸ್ಥಳಗಳಲ್ಲಿ, ಸ್ವಚ್ಛತೆಯಿಂದ ಕೂಡಿರುವ ವಿಶಾಲ ಮೈದಾನಗಳಲ್ಲಿ ವಾಯುವಿಹಾರ ಮಾಡುವುದು ಸೂಕ್ತ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

4 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

4 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

5 hours ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

6 hours ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

7 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

7 hours ago