ಓದುಗರ ಪತ್ರ
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ – ಜೆಪಿ ನಗರದ ಅಕ್ಕಮಹಾದೇವಿ ರಸ್ತೆ, ಗೋಕುಲಂ ರಸ್ತೆ ಹಾಗೂ ಹೂಟಗಳ್ಳಿ ರಸ್ತೆಯೂ ಸೇರಿದಂತೆ ಇನ್ನೂ ಬಹುತೇಕ ರಸ್ತೆಗಳಲ್ಲಿ ಬಹುತೇಕ ಹಿರಿಯ ನಾಗರಿಕರು ಹಾಗೂ ವಿವಿಧ ವಯೋಮಾನದವರು ಮುಂಜಾನೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡುತ್ತಾರೆ. ಎರಡು ಮೂರು ಮಂದಿ ಗುಂಪಿನಲ್ಲಿ ಮಾತನಾಡಿಕೊಂಡು ವಾಯುವಿಹಾರ ಮಾಡುವಾಗ ರಸ್ತೆಯಲ್ಲಿದ್ದೇವೆ ಎಂಬುದನ್ನೇ ಮರೆಯುತ್ತಾರೆ. ಕೆಲವು ಸಂದರ್ಭದಲ್ಲಿ ವಾಹನ ಸವಾರರು ಹಾರ್ನ್ ಮಾಡಿದರೂ ದಾರಿ ಬಿಡುವುದಿಲ್ಲ.
ಇದನ್ನೂ ಓದಿ:-ಶಿವಾಜಿ ಗಣೇಶನ್ ಅವರ ದೆಹಲಿ ಕಣ್ಣೋಟ : ಉನ್ನತ ಶಿಕ್ಷಣದಲ್ಲಿ ಬದಲಾವಣೆಗೆ ಕೇಂದ್ರದ ಮುನ್ನುಡಿ
ಕೆಲವು ವಾಹನ ಸವಾರರು ಮದ್ಯಪಾನ ಮಾಡಿ ಮಿತಿ ಮೀರಿದ ವೇಗದಲ್ಲಿ ವಾಹನ ಚಾಲನೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅಪಘಾತವಾಗುವ ಸಂಭವವಿರುತ್ತದೆ. ಪಾದಚಾರಿಗಳು ನಿಯಮ ಪಾಲಿಸದೇ ರಸ್ತೆಯ ಮೇಲೆ ನಡೆಯುತ್ತಿದ್ದರೆ ಪರಿಹಾರವೂ ಸಿಗುವುದಿಲ್ಲ. ರಸ್ತೆಯಲ್ಲಿ ವಾಯುವಿಹಾರ ಮಾಡುವುದಕ್ಕಿಂತ ಉದ್ಯಾನವನ ಸ್ಥಳಗಳಲ್ಲಿ, ಸ್ವಚ್ಛತೆಯಿಂದ ಕೂಡಿರುವ ವಿಶಾಲ ಮೈದಾನಗಳಲ್ಲಿ ವಾಯುವಿಹಾರ ಮಾಡುವುದು ಸೂಕ್ತ. -ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…