ಓದುಗರ ಪತ್ರ
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ ಎಚ್ಚರಿಕೆಗಳನ್ನು ಅರಿಯದೆ ಮನುಷ್ಯ ಪದೇ ಪದೇ ಅದರ ಒಡಲನ್ನು ಬಗೆಯುತ್ತಿದ್ದಾನೆ. ಇದರ ಪರಿಣಾಮವಾಗಿ ಪ್ರಕೃತಿಯು ಅತಿವೃಷ್ಟಿ ಅನಾವೃಷ್ಟಿಗಳ ಮೂಲಕ ಮನುಷ್ಯನಿಗೆ ಪಾಠ ಕಲಿಸುತ್ತಲೇ ಇದೆ. ಅಭಿ ವೃದ್ಧಿಯ ಹೆಸರಿನಲ್ಲಿ ಬೆಟ್ಟಗಳನ್ನು ಕೊರೆಯುವ, ಕಾಡುಗಳನ್ನು ಕಡಿದು ನಾಶ ಮಾಡುವ ಮನುಷ್ಯನ ಅತಿಯಾಸೆಯ ಪರಿಣಾಮವನ್ನು ಇಂದು ಅನಾಹುತಗಳರೂಪದಲ್ಲಿ ಅನುಭವಿಸುವಂತಾಗಿದೆ. ಅಭಿವೃದ್ಧಿ ಆಗಬೇಕು ನಿಜ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ರಸ್ತೆ ರೈಲು ಮಾರ್ಗಗಳನ್ನು ನಿರ್ಮಿಸಲು, ಗಣಿಗಾರಿಕೆಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆ ಯುವುದರಿಂದ ಅದು ಮುಂದೊಂದು ದಿನಮನುಷ್ಯನಿಗೆ ಅಪಾಯತರಬಲ್ಲದು ಎಂಬುದಕ್ಕೆ ವಯನಾಡಿನಘಟನೆಗಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…