ಓದುಗರ ಪತ್ರ
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ ಎಚ್ಚರಿಕೆಗಳನ್ನು ಅರಿಯದೆ ಮನುಷ್ಯ ಪದೇ ಪದೇ ಅದರ ಒಡಲನ್ನು ಬಗೆಯುತ್ತಿದ್ದಾನೆ. ಇದರ ಪರಿಣಾಮವಾಗಿ ಪ್ರಕೃತಿಯು ಅತಿವೃಷ್ಟಿ ಅನಾವೃಷ್ಟಿಗಳ ಮೂಲಕ ಮನುಷ್ಯನಿಗೆ ಪಾಠ ಕಲಿಸುತ್ತಲೇ ಇದೆ. ಅಭಿ ವೃದ್ಧಿಯ ಹೆಸರಿನಲ್ಲಿ ಬೆಟ್ಟಗಳನ್ನು ಕೊರೆಯುವ, ಕಾಡುಗಳನ್ನು ಕಡಿದು ನಾಶ ಮಾಡುವ ಮನುಷ್ಯನ ಅತಿಯಾಸೆಯ ಪರಿಣಾಮವನ್ನು ಇಂದು ಅನಾಹುತಗಳರೂಪದಲ್ಲಿ ಅನುಭವಿಸುವಂತಾಗಿದೆ. ಅಭಿವೃದ್ಧಿ ಆಗಬೇಕು ನಿಜ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ರಸ್ತೆ ರೈಲು ಮಾರ್ಗಗಳನ್ನು ನಿರ್ಮಿಸಲು, ಗಣಿಗಾರಿಕೆಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆ ಯುವುದರಿಂದ ಅದು ಮುಂದೊಂದು ದಿನಮನುಷ್ಯನಿಗೆ ಅಪಾಯತರಬಲ್ಲದು ಎಂಬುದಕ್ಕೆ ವಯನಾಡಿನಘಟನೆಗಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…