ಓದುಗರ ಪತ್ರ

ಓದುಗರ ಪತ್ರ | ವಯನಾಡು ದುರಂತ: ಎಚ್ಚೆತ್ತುಗೊಳ್ಳುವುದು ಅಗತ್ಯ

ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ ಎಚ್ಚರಿಕೆಗಳನ್ನು ಅರಿಯದೆ ಮನುಷ್ಯ ಪದೇ ಪದೇ ಅದರ ಒಡಲನ್ನು ಬಗೆಯುತ್ತಿದ್ದಾನೆ. ಇದರ ಪರಿಣಾಮವಾಗಿ ಪ್ರಕೃತಿಯು ಅತಿವೃಷ್ಟಿ ಅನಾವೃಷ್ಟಿಗಳ ಮೂಲಕ ಮನುಷ್ಯನಿಗೆ ಪಾಠ ಕಲಿಸುತ್ತಲೇ ಇದೆ. ಅಭಿ ವೃದ್ಧಿಯ ಹೆಸರಿನಲ್ಲಿ ಬೆಟ್ಟಗಳನ್ನು ಕೊರೆಯುವ, ಕಾಡುಗಳನ್ನು ಕಡಿದು ನಾಶ ಮಾಡುವ ಮನುಷ್ಯನ ಅತಿಯಾಸೆಯ ಪರಿಣಾಮವನ್ನು ಇಂದು ಅನಾಹುತಗಳರೂಪದಲ್ಲಿ ಅನುಭವಿಸುವಂತಾಗಿದೆ. ಅಭಿವೃದ್ಧಿ ಆಗಬೇಕು ನಿಜ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ರಸ್ತೆ ರೈಲು ಮಾರ್ಗಗಳನ್ನು ನಿರ್ಮಿಸಲು, ಗಣಿಗಾರಿಕೆಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆ ಯುವುದರಿಂದ ಅದು ಮುಂದೊಂದು ದಿನಮನುಷ್ಯನಿಗೆ ಅಪಾಯತರಬಲ್ಲದು ಎಂಬುದಕ್ಕೆ ವಯನಾಡಿನಘಟನೆಗಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago