ಓದುಗರ ಪತ್ರ
ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಸಂಭವಿಸಿದ ಭೀಕರ ಭೂ ಕುಸಿತ ಮತ್ತು ಪ್ರವಾಹ ದಿಂದಾಗಿ ಮಕ್ಕಳೂ ಸೇರಿದಂತೆ ನೂರಾರು ಮಂದಿ ಸಾವನಪ್ಪಿದ್ದಾರೆ. ಶಿರೂರು ಗುಡ್ಡ ಕುಸಿತ ಪ್ರಕರಣದ ಬೆನ್ನಲ್ಲೇ ವಯನಾಡಿನಲ್ಲಿ ಭೂ ಕುಸಿತ ಸಂಭವಿಸಿರುವುದು ಜನರನ್ನು ಆತಂಕಕ್ಕೀಡು ಮಾಡಿದೆ. ಪ್ರಕೃತಿಯ ಎಚ್ಚರಿಕೆಗಳನ್ನು ಅರಿಯದೆ ಮನುಷ್ಯ ಪದೇ ಪದೇ ಅದರ ಒಡಲನ್ನು ಬಗೆಯುತ್ತಿದ್ದಾನೆ. ಇದರ ಪರಿಣಾಮವಾಗಿ ಪ್ರಕೃತಿಯು ಅತಿವೃಷ್ಟಿ ಅನಾವೃಷ್ಟಿಗಳ ಮೂಲಕ ಮನುಷ್ಯನಿಗೆ ಪಾಠ ಕಲಿಸುತ್ತಲೇ ಇದೆ. ಅಭಿ ವೃದ್ಧಿಯ ಹೆಸರಿನಲ್ಲಿ ಬೆಟ್ಟಗಳನ್ನು ಕೊರೆಯುವ, ಕಾಡುಗಳನ್ನು ಕಡಿದು ನಾಶ ಮಾಡುವ ಮನುಷ್ಯನ ಅತಿಯಾಸೆಯ ಪರಿಣಾಮವನ್ನು ಇಂದು ಅನಾಹುತಗಳರೂಪದಲ್ಲಿ ಅನುಭವಿಸುವಂತಾಗಿದೆ. ಅಭಿವೃದ್ಧಿ ಆಗಬೇಕು ನಿಜ. ಆದರೆ ಅದು ಪರಿಸರ ಸ್ನೇಹಿಯಾಗಿರಬೇಕು. ರಸ್ತೆ ರೈಲು ಮಾರ್ಗಗಳನ್ನು ನಿರ್ಮಿಸಲು, ಗಣಿಗಾರಿಕೆಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆ ಯುವುದರಿಂದ ಅದು ಮುಂದೊಂದು ದಿನಮನುಷ್ಯನಿಗೆ ಅಪಾಯತರಬಲ್ಲದು ಎಂಬುದಕ್ಕೆ ವಯನಾಡಿನಘಟನೆಗಿಂತ ಮತ್ತೊಂದು ಉದಾಹರಣೆ ಬೇಕಿಲ್ಲ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ,
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…