ಓದುಗರ ಪತ್ರ

ಓದುಗರ ಪತ್ರ| ಕನ್ನಡದಲ್ಲಿ ಶಬ್ದಗಳಿರಲಿಲ್ಲವೇ?

ಜ್ಞಾನ, ಆರೋಗ್ಯ ಮತ್ತು ಸಂಶೋಧನೆಗಾಗಿ ಇರುವ ಯೋಜನೆ ‘ಕ್ವಿನ್ ಸಿಟಿ’ (knowledge, ellbeing and innovation kwin city)ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾಬಸ್ ಪೇಟೆಯಲ್ಲಿ ಚಾಲನೆ ನೀಡಿದ್ದಾರೆ.

ಇದೊಂದು ಮಹತ್ವಾಕಾಂಕ್ಷೆಯ ಯೋಜನೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಪ್ರತಿಬಾರಿಯೂ ತಮ್ಮ ಆಡಳಿತದಲ್ಲಿ ಕನ್ನಡ ಅನುಷ್ಠಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಇಂಥ ಮಹತ್ವಾಕಾಂಕ್ಷೆಯ ಯೋಜನೆಗಳಿಗೆ ಕನ್ನಡದ ಹೆಸರುಗಳನ್ನಿಡುವ ಬದಲು ಆಂಗ್ಲ ಭಾಷೆಯ ಹೆಸರಿಟ್ಟಿರುವುದು ತೀರಾ ಆಶ್ಚರ್ಯ. ಇಂಗ್ಲಿಷ್ ಹೆಸರಿನ ವ್ಯಾಮೋಹವನ್ನು ಬಿಟ್ಟು ಕನ್ನಡದಲ್ಲಿಯೇ ಸರಳವಾಗಿ ‘ಜ್ಞಾನ ನಗರಿ’ ಎಂದು ಹೆಸರಿಡಬಹುದಿತ್ತಲ್ಲವೇ? ಸರ್ಕಾರಕ್ಕೆ ‘ಕನ್ನಡ ಬದ್ಧತೆ’ ಇರುವುದು ಕೇವಲ ವೇದಿಕೆಗಳ ಮೇಲೆ ಮಾತ್ರವೇ? ಮುಖ್ಯಮಂತ್ರಿಗಳಿಗೆ ಕನ್ನಡದ ಮೇಲಿನ ಪ್ರೀತಿ ಕೇವಲ ವೇದಿಕೆಗಳಿಗೆ ಮಾತ್ರ ಸೀಮಿತವಾಗಿದೆಯೇ ವಿನಾ ಆಡಳಿತದಲ್ಲಿಲ್ಲ ಅನಿಸುತ್ತದೆ.

-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

1 hour ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

1 hour ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

1 hour ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

1 hour ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

13 hours ago