ಓದುಗರ ಪತ್ರ
ಭಾರತ ಕ್ರಿಕೆಟ್ ಟೆಸ್ಟ್ ತಂಡದ ಪ್ರಮುಖ ಆಟಗಾರರಾದ ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಏಕಾಏಕಿ ನಿವೃತ್ತಿ ಘೋಷಿಸಿರುವುದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ಭಾರತದ ಇತ್ತೀಚಿನ ಬಹುತೇಕ ಯಶಸ್ಸಿನಲ್ಲಿ ಈ ಮೂರೂ ಆಟಗಾರರ ಕೊಡುಗೆ ಪ್ರಮುಖ ವಾಗಿತ್ತು.
ಟೆಸ್ಟ್ ಕ್ರಿಕೆಟ್ಗೂ, ಟಿ-೨೦ ಅಥವಾ ಏಕದಿನ ಪಂದ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಟಿ-೨೦ ಹೊಡಿಬಡಿ ಆಟವಾಗಿರುವುದರಿಂದ ಹೊಸಬರು ಬೇಗನೇ ಆಟಕ್ಕೆ ಹೊಂದಿಕೊಳ್ಳ ಬಹುದು. ಆದರೆ ಟೆಸ್ಟ್ ಕ್ರಿಕೆಟ್ನಲ್ಲಿ ತಾಳ್ಮೆ ಯಿಂದ ಆಡಬೇಕಾಗುತ್ತದೆ. ಈ ಹಿಂದೆಯೂ ಭಾರತ ತಂಡದ ಪ್ರಮುಖ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ನಿವೃತ್ತರಾದಾಗಲೂ ಭಾರತಕ್ಕೆ ಇದೇ ಸಮಸ್ಯೆ ಎದುರಾಗಿತ್ತು. ಮತ್ತೋರ್ವ ಹಿರಿಯ ಕ್ರಿಕೆಟ್ ಪಟು ರವೀಂದ್ರ ಜಡೇಜಾ ನಿವೃತ್ತಿ ಅಂಚಿನಲ್ಲಿದ್ದಾರೆ.
ಭಾರತದ ಈಗಿರುವ ಟೆಸ್ಟ್ ತಂಡ ಸಾಕಷ್ಟು ಯುವ ಪ್ರತಿಭೆಗಳಿಂದ ಕೂಡಿದ್ದು, ಅವರು ಪ್ರಬುದ್ಧರಾಗಿ ಬೆಳೆಯಲು ಸಾಕಷ್ಟು ಸಮಯ ಹಿಡಿಯುತ್ತದೆ. ಮುಂಬರುವ ಇಂಗ್ಲೆಂಡ್ ಸರಣಿ ಭಾರತದ ಪಾಲಿಗೆ ಕಬ್ಬಿಣದ ಕಡಲೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…