ಓದುಗರ ಪತ್ರ
ಭಾರತ ಕ್ರಿಕೆಟ್ ಟೆಸ್ಟ್ ತಂಡದ ಪ್ರಮುಖ ಆಟಗಾರರಾದ ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಏಕಾಏಕಿ ನಿವೃತ್ತಿ ಘೋಷಿಸಿರುವುದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ಭಾರತದ ಇತ್ತೀಚಿನ ಬಹುತೇಕ ಯಶಸ್ಸಿನಲ್ಲಿ ಈ ಮೂರೂ ಆಟಗಾರರ ಕೊಡುಗೆ ಪ್ರಮುಖ ವಾಗಿತ್ತು.
ಟೆಸ್ಟ್ ಕ್ರಿಕೆಟ್ಗೂ, ಟಿ-೨೦ ಅಥವಾ ಏಕದಿನ ಪಂದ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಟಿ-೨೦ ಹೊಡಿಬಡಿ ಆಟವಾಗಿರುವುದರಿಂದ ಹೊಸಬರು ಬೇಗನೇ ಆಟಕ್ಕೆ ಹೊಂದಿಕೊಳ್ಳ ಬಹುದು. ಆದರೆ ಟೆಸ್ಟ್ ಕ್ರಿಕೆಟ್ನಲ್ಲಿ ತಾಳ್ಮೆ ಯಿಂದ ಆಡಬೇಕಾಗುತ್ತದೆ. ಈ ಹಿಂದೆಯೂ ಭಾರತ ತಂಡದ ಪ್ರಮುಖ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ನಿವೃತ್ತರಾದಾಗಲೂ ಭಾರತಕ್ಕೆ ಇದೇ ಸಮಸ್ಯೆ ಎದುರಾಗಿತ್ತು. ಮತ್ತೋರ್ವ ಹಿರಿಯ ಕ್ರಿಕೆಟ್ ಪಟು ರವೀಂದ್ರ ಜಡೇಜಾ ನಿವೃತ್ತಿ ಅಂಚಿನಲ್ಲಿದ್ದಾರೆ.
ಭಾರತದ ಈಗಿರುವ ಟೆಸ್ಟ್ ತಂಡ ಸಾಕಷ್ಟು ಯುವ ಪ್ರತಿಭೆಗಳಿಂದ ಕೂಡಿದ್ದು, ಅವರು ಪ್ರಬುದ್ಧರಾಗಿ ಬೆಳೆಯಲು ಸಾಕಷ್ಟು ಸಮಯ ಹಿಡಿಯುತ್ತದೆ. ಮುಂಬರುವ ಇಂಗ್ಲೆಂಡ್ ಸರಣಿ ಭಾರತದ ಪಾಲಿಗೆ ಕಬ್ಬಿಣದ ಕಡಲೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…