ಓದುಗರ ಪತ್ರ
ಭಾರತ ಕ್ರಿಕೆಟ್ ಟೆಸ್ಟ್ ತಂಡದ ಪ್ರಮುಖ ಆಟಗಾರರಾದ ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮ ಹಾಗೂ ವಿರಾಟ್ ಕೊಹ್ಲಿ ಏಕಾಏಕಿ ನಿವೃತ್ತಿ ಘೋಷಿಸಿರುವುದು ಭಾರತ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಏಕೆಂದರೆ ಭಾರತದ ಇತ್ತೀಚಿನ ಬಹುತೇಕ ಯಶಸ್ಸಿನಲ್ಲಿ ಈ ಮೂರೂ ಆಟಗಾರರ ಕೊಡುಗೆ ಪ್ರಮುಖ ವಾಗಿತ್ತು.
ಟೆಸ್ಟ್ ಕ್ರಿಕೆಟ್ಗೂ, ಟಿ-೨೦ ಅಥವಾ ಏಕದಿನ ಪಂದ್ಯಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಟಿ-೨೦ ಹೊಡಿಬಡಿ ಆಟವಾಗಿರುವುದರಿಂದ ಹೊಸಬರು ಬೇಗನೇ ಆಟಕ್ಕೆ ಹೊಂದಿಕೊಳ್ಳ ಬಹುದು. ಆದರೆ ಟೆಸ್ಟ್ ಕ್ರಿಕೆಟ್ನಲ್ಲಿ ತಾಳ್ಮೆ ಯಿಂದ ಆಡಬೇಕಾಗುತ್ತದೆ. ಈ ಹಿಂದೆಯೂ ಭಾರತ ತಂಡದ ಪ್ರಮುಖ ಆಟಗಾರರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ನಿವೃತ್ತರಾದಾಗಲೂ ಭಾರತಕ್ಕೆ ಇದೇ ಸಮಸ್ಯೆ ಎದುರಾಗಿತ್ತು. ಮತ್ತೋರ್ವ ಹಿರಿಯ ಕ್ರಿಕೆಟ್ ಪಟು ರವೀಂದ್ರ ಜಡೇಜಾ ನಿವೃತ್ತಿ ಅಂಚಿನಲ್ಲಿದ್ದಾರೆ.
ಭಾರತದ ಈಗಿರುವ ಟೆಸ್ಟ್ ತಂಡ ಸಾಕಷ್ಟು ಯುವ ಪ್ರತಿಭೆಗಳಿಂದ ಕೂಡಿದ್ದು, ಅವರು ಪ್ರಬುದ್ಧರಾಗಿ ಬೆಳೆಯಲು ಸಾಕಷ್ಟು ಸಮಯ ಹಿಡಿಯುತ್ತದೆ. ಮುಂಬರುವ ಇಂಗ್ಲೆಂಡ್ ಸರಣಿ ಭಾರತದ ಪಾಲಿಗೆ ಕಬ್ಬಿಣದ ಕಡಲೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ.
-ಜಿ. ಪಿ. ಹರೀಶ್, ವಿ. ವಿ. ಮೊಹಲ್ಲ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…