ಓದುಗರ ಪತ್ರ

ಓದುಗರ ಪತ್ರ | ಹಸುವಿನ ಮೇಲೆ ಕ್ರೌರ್ಯವೇಕೆ?

ಇತ್ತೀಚಿನ ದಿನಗಳಲ್ಲಿ ಗೋವು ರಾಜಕೀಯ ದಾಳವಾಗಿದ್ದು, ಗೋವುಗಳ ಮೇಲಿನ ರಾಜಕಾರಣ ಕ್ರೌರ್ಯಕ್ಕೆ ತಿರುಗಿರುವುದು ಬೇಸರದ ಸಂಗತಿ.

ಆಗಾಗ್ಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ಗೋ ರಕ್ಷಕರು ಹಿಡಿದು ಗೋವುಗಳನ್ನು ಬಿಡಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಿದ ಸಾಕಷ್ಟು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ ಈಗ ಕೆಲ ಕಿಡಿಗೇಡಿಗಳು ಗೋವುಗಳ ಮೇಲೆ ಕ್ರೌರ್ಯವೆಸಗುತ್ತಿದ್ದು, ವಿಕೃತವಾಗಿ ಗೋವುಗಳನ್ನು ಹಿಂಸಿಸುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣ ಮಾಸುವ ಮುನ್ನವೇ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಕರುವಿನ ಬಾಲವನ್ನು ಕತ್ತರಿಸಿ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಅಮಾನವೀಯ ದುಷ್ಕೃತ್ಯಗಳು ಹೆಚ್ಚಾಗಿದ್ದು, ಸಮಾಜದ ಶಾಂತಿ ಕದಡಲು ಇಂತಹ ಘಟನೆಗಳು ಕಾರಣವಾಗುತ್ತಿವೆ. ಒಂದು ಪಕ್ಷದ ಮೇಲಿನ ಅಥವಾ ಒಂದು ಸಮುದಾಯದ ಮೇಲಿನ ಧ್ವೇಷದಿಂದ ಮೂಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವುದು ಎಷ್ಟು ಸರಿ? ಸರ್ಕಾರ ಇಂತಹ ವಿಚಾರದಲ್ಲಿ ಯಾವುದೇ ಪಕ್ಷಪಾತ ಮಾಡದೆ ವಿಕೃತ ಕ್ರೌರ್ಯ ಮೆರೆದಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

8 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

8 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

8 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

8 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

9 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

9 hours ago