ಓದುಗರ ಪತ್ರ

ಓದುಗರ ಪತ್ರ | ಹಸುವಿನ ಮೇಲೆ ಕ್ರೌರ್ಯವೇಕೆ?

ಇತ್ತೀಚಿನ ದಿನಗಳಲ್ಲಿ ಗೋವು ರಾಜಕೀಯ ದಾಳವಾಗಿದ್ದು, ಗೋವುಗಳ ಮೇಲಿನ ರಾಜಕಾರಣ ಕ್ರೌರ್ಯಕ್ಕೆ ತಿರುಗಿರುವುದು ಬೇಸರದ ಸಂಗತಿ.

ಆಗಾಗ್ಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ಗೋ ರಕ್ಷಕರು ಹಿಡಿದು ಗೋವುಗಳನ್ನು ಬಿಡಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಿದ ಸಾಕಷ್ಟು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ ಈಗ ಕೆಲ ಕಿಡಿಗೇಡಿಗಳು ಗೋವುಗಳ ಮೇಲೆ ಕ್ರೌರ್ಯವೆಸಗುತ್ತಿದ್ದು, ವಿಕೃತವಾಗಿ ಗೋವುಗಳನ್ನು ಹಿಂಸಿಸುತ್ತಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಪ್ರಕರಣ ಮಾಸುವ ಮುನ್ನವೇ ನಂಜನಗೂಡಿನ ನಂಜುಂಡೇಶ್ವರ ದೇವಾಲಯಕ್ಕೆ ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಕರುವಿನ ಬಾಲವನ್ನು ಕತ್ತರಿಸಿ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂತಹ ಅಮಾನವೀಯ ದುಷ್ಕೃತ್ಯಗಳು ಹೆಚ್ಚಾಗಿದ್ದು, ಸಮಾಜದ ಶಾಂತಿ ಕದಡಲು ಇಂತಹ ಘಟನೆಗಳು ಕಾರಣವಾಗುತ್ತಿವೆ. ಒಂದು ಪಕ್ಷದ ಮೇಲಿನ ಅಥವಾ ಒಂದು ಸಮುದಾಯದ ಮೇಲಿನ ಧ್ವೇಷದಿಂದ ಮೂಕ ಪ್ರಾಣಿಗಳಿಗೆ ಚಿತ್ರಹಿಂಸೆ ನೀಡುವುದು ಎಷ್ಟು ಸರಿ? ಸರ್ಕಾರ ಇಂತಹ ವಿಚಾರದಲ್ಲಿ ಯಾವುದೇ ಪಕ್ಷಪಾತ ಮಾಡದೆ ವಿಕೃತ ಕ್ರೌರ್ಯ ಮೆರೆದಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago