ಓದುಗರ ಪತ್ರ

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಭಯವನ್ನು ನಿವಾರಿಸಿ ವಿಶೇಷ ಬೋಧನೆ ಮಾಡಿ ಅವರನ್ನು ಪರೀಕ್ಷೆಗೆ ಸಿದ್ಧಗೊಳಿಸಲಾಗಿದೆ. ಮೈಸೂರು ಆಕಾಶವಾಣಿಯಿಂದಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗೆ ಸಿದ್ಧರಾಗೋಣ ಬನ್ನಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಹಲವಾರು ಕಂತುಗಳಲ್ಲಿ ನುರಿತ ಶಿಕ್ಷಕರನ್ನು ಆಹ್ವಾನಿಸಿ ವಿಷಯ ತಜ್ಞರೊಡನೆ ವಿಷಯಗಳನ್ನು ಚರ್ಚಿಸಿ ತೇರ್ಗಡೆ ಹೊಂದುವುದು ಹಾಗೂ ಅಂಕಗಳನ್ನು ಗಳಿಸುವ ಸುಲಭ ವಿಧಾನದ ಬಗ್ಗೆ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯವನ್ನು ಬಿಟ್ಟು ಹಬ್ಬದಂತೆ ಸಂಭ್ರಮಿಸಿ ಬರೆಯಬೇಕು. ಪರೀಕ್ಷೆಗೆ ಬೇಕಾದಂತ ಪ್ರವೇಶಪತ್ರ (ಹಾಲ್ ಟಿಕೆಟ್), ಪೆನ್ನು, ಪೆನ್ಸಿಲ್‌ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವ ಅರ್ಧ ಗಂಟೆ ಮುಂಚೆ ಹಾಜರಾಗಬೇಕು, ನಗರ ಪ್ರದೇಶದ ವಿದ್ಯಾರ್ಥಿಗಳೂ ಆತುರ ಪಡದೆ ಸಕಾಲಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು.

ಪೋಷಕರು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷೆ ಮುಗಿದ ನಂತರ ಮಕ್ಕಳನ್ನು ಮನೆಗೆ ಕರೆತರಬೇಕು.
-ಕಣ್ಣೂರು ವಿ.ಗೋವಿಂದಾಚಾರಿ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

20 mins ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

1 hour ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

2 hours ago

ಡಿಕೆಶಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರೋದು ನಿಜ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…

2 hours ago

ಮೈಸೂರಿನಲ್ಲಿ ಮುಂದುವರಿದ ಕಾಡುಪ್ರಾಣಿಗಳ ಉಪಟಳ

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…

3 hours ago

ಓದುಗರ ಪತ್ರ: ಚಿನ್ನದ ಹೆಸರಿನಲ್ಲಾಗುವ ವಂಚನೆಯನ್ನು ತಡೆಗಟ್ಟಿ

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…

4 hours ago