ಓದುಗರ ಪತ್ರ

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಲ್ಲಿರುವ ಭಯವನ್ನು ನಿವಾರಿಸಿ ವಿಶೇಷ ಬೋಧನೆ ಮಾಡಿ ಅವರನ್ನು ಪರೀಕ್ಷೆಗೆ ಸಿದ್ಧಗೊಳಿಸಲಾಗಿದೆ. ಮೈಸೂರು ಆಕಾಶವಾಣಿಯಿಂದಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ‘ಪರೀಕ್ಷೆಗೆ ಸಿದ್ಧರಾಗೋಣ ಬನ್ನಿ’ ಎಂಬ ಶೀರ್ಷಿಕೆ ಅಡಿಯಲ್ಲಿ ಹಲವಾರು ಕಂತುಗಳಲ್ಲಿ ನುರಿತ ಶಿಕ್ಷಕರನ್ನು ಆಹ್ವಾನಿಸಿ ವಿಷಯ ತಜ್ಞರೊಡನೆ ವಿಷಯಗಳನ್ನು ಚರ್ಚಿಸಿ ತೇರ್ಗಡೆ ಹೊಂದುವುದು ಹಾಗೂ ಅಂಕಗಳನ್ನು ಗಳಿಸುವ ಸುಲಭ ವಿಧಾನದ ಬಗ್ಗೆ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗಿದೆ.

ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯವನ್ನು ಬಿಟ್ಟು ಹಬ್ಬದಂತೆ ಸಂಭ್ರಮಿಸಿ ಬರೆಯಬೇಕು. ಪರೀಕ್ಷೆಗೆ ಬೇಕಾದಂತ ಪ್ರವೇಶಪತ್ರ (ಹಾಲ್ ಟಿಕೆಟ್), ಪೆನ್ನು, ಪೆನ್ಸಿಲ್‌ಗಳನ್ನು ಸಿದ್ಧವಾಗಿ ಇಟ್ಟುಕೊಳ್ಳಬೇಕು. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳು ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಉಪಯೋಗಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವ ಅರ್ಧ ಗಂಟೆ ಮುಂಚೆ ಹಾಜರಾಗಬೇಕು, ನಗರ ಪ್ರದೇಶದ ವಿದ್ಯಾರ್ಥಿಗಳೂ ಆತುರ ಪಡದೆ ಸಕಾಲಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು.

ಪೋಷಕರು ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದು, ಪರೀಕ್ಷೆ ಮುಗಿದ ನಂತರ ಮಕ್ಕಳನ್ನು ಮನೆಗೆ ಕರೆತರಬೇಕು.
-ಕಣ್ಣೂರು ವಿ.ಗೋವಿಂದಾಚಾರಿ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago