ಓದುಗರ ಪತ್ರ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.
-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…
ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…
ಬೆಂಗಳೂರು: ಮಾರ್ಚ್.28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್ ಸೀಮಂತ್ ಕುಮಾರ್…
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…