ಓದುಗರ ಪತ್ರ

ಓದುಗರ ಪತ್ರ|ಉಪಚುನಾವಣೆಗಳಿಂದ ಸಾರ್ವಜನಿಕರಿಗೆ ಹೊರೆ

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.

-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ವಯನಾಡು ಕ್ಷೇತ್ರಕ್ಕೆ 10 ಕೋಟಿ ಅನುದಾನ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…

18 mins ago

ಮತಾಂತರಗೊಂಡರೆ ಎಸ್‌.ಸಿ ಸ್ಥಾನಮಾನ ರದ್ದು: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…

30 mins ago

ಬಂಡೀಪುರದಲ್ಲಿ ಏಪ್ರಿಲ್.1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ: ಕಾರಣ ಇಷ್ಟೇ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.‌1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…

2 hours ago

ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬದಂದು ‘ರಂಗೋಲಿ’ ಶುಭಾಶಯ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ…

2 hours ago

ಮಾರ್ಚ್.‌28ರಂದು ಐಪಿಎಲ್‌ ಉದ್ಘಾಟನಾ ಪಂದ್ಯ: ಆನ್‌ಲೈನ್‌ನಲ್ಲಿ ಮಾತ್ರ ಟಿಕೆಟ್‌ ಬುಕ್ಕಿಂಗ್‌

ಬೆಂಗಳೂರು: ಮಾರ್ಚ್.‌28ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕಮಿಷನರ್‌ ಸೀಮಂತ್‌ ಕುಮಾರ್‌…

2 hours ago

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ…

3 hours ago