ಓದುಗರ ಪತ್ರ

ಓದುಗರ ಪತ್ರ|ಉಪಚುನಾವಣೆಗಳಿಂದ ಸಾರ್ವಜನಿಕರಿಗೆ ಹೊರೆ

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.

-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

1 hour ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago