ಓದುಗರ ಪತ್ರ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.
-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…