ಓದುಗರ ಪತ್ರ
ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.
ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.
-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…