ಓದುಗರ ಪತ್ರ

ಓದುಗರ ಪತ್ರ|ಉಪಚುನಾವಣೆಗಳಿಂದ ಸಾರ್ವಜನಿಕರಿಗೆ ಹೊರೆ

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದ್ದು, ಚುನಾವಣೆಯಲ್ಲಿ ಗೆಲ್ಲಲು ಎಲ್ಲ ರಾಜಕೀಯ ಪಕ್ಷಗಳೂ ಕಾರ್ಯತಂತ್ರ ರೂಪಿಸುತ್ತಿವೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಗೆದ್ದರೂ ಅದರಿಂದ ಆಡಳಿತಾರೂಢ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇದು ರಾಜಕಾರಣಿಗಳಿಗೆ ಜಿದ್ದಿನ ಹಣಾಹಣಿಯಾದರೆ, ಉಪ ಚುನಾವಣೆಗಳ ವೆಚ್ಚವನ್ನು ಸಾರ್ವಜನಿಕರ ತೆರಿಗೆ ಹಣದಿಂದಲೇ ಭರಿಸುವುದರಿಂದ ಸಾರ್ವಜನಿಕರಿಗೆ ಮಾತ್ರ ಹೊರೆಯಾಗಿ ಪರಿಣಮಿಸಲಿದೆ. ಅಧಿಕಾರದ ಆಸೆಗಾಗಿ ಒಂದು ಚುನಾವಣೆಯಲ್ಲಿ ಗೆದ್ದಿದ್ದರೂ ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಂದು ಚುನಾವಣೆಯಲ್ಲಿ ಸ್ಪರ್ಧಿ ಸುವುದು ರಾಜಕಾರಣಿಗಳಿಗೆ ಒಂದು ರೀತಿಯ ಮೋಜಿನ ಆಟದಂತಾಗಿ ಹೋಗಿದೆ. ಮೊದಲೆಲ್ಲ ಶಾಸಕರು ಅಥವಾ ಸಂಸದರು ಸಾವನ್ನಪ್ಪಿದಾಗ ನಡೆಯುತ್ತಿದ್ದ ಉಪಚುನಾವಣೆಗಳು ಈಗ ಅಧಿಕಾರ ದಾಸೆಗಾಗಿ ನಡೆಯುತ್ತಿರುವುದು ವಿಪರ್ಯಾಸ. ಇದರಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ. ಆದ್ದರಿಂದ ಚುನಾವಣಾ ಆಯೋಗವು ಒಂದು ಕ್ಷೇತ್ರದಲ್ಲಿ ಗೆದ್ದು ಬಳಿಕ ಮತ್ತೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಸಲುವಾಗಿ ಗೆದ್ದಕ್ಷೇತ್ರದಸ್ಥಾನಕರಾಜೀನಾಮೆ ನೀಡುವ ವ್ಯಕ್ತಿಯೇ ಉಪಚುನಾವಣೆಯ ವೆಚ್ಚವನ್ನು ಭರಿಸಬೇಕು ಎಂಬ ಕಾನೂನು ರೂಪಿಸಬೇಕಿದೆ. ಇಲ್ಲವೇ ಆಕ್ಷೇತ್ರದಲ್ಲಿ ಎರಡನೇ ಸ್ಥಾನ ಪಡೆದವರನ್ನು ವಿಜಯಿ ಎಂದು ಘೋಷಿಸಬೇಕಿದೆ. ಆಗಿದ್ದಾಗ ಮಾತ್ರ ಉಪ ಚುನಾವಣೆಗಳು ಕಡಿಮೆಯಾಗಿ ಸಾರ್ವಜನಿಕರ ತೆರಿಗೆ ಹಣ ಪೋಲಾಗುವುದು ತಪ್ಪುತ್ತದೆ.

-ಯು.ಟಿ.ಸೋಮಶೇಖರ, ಉದ್ದೂರು, ಮೈಸೂರು ತಾ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

20 hours ago