ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ, ರಾತ್ರಿವೇಳೆ ದೀಪಾಲಂಕಾರಕ್ಕೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿರುವ ಮರಗಳಿಗೆ ಸಣ್ಣಸಣ್ಣಬಲ್ಬ್ಗಳಿರುವ ಸರಳುಗಳನ್ನು ಅಳವಡಿಸುವ ನೆಪದಲ್ಲಿ ಒಂದೊಂದು ಮರಗಳಿಗೆ ಸುಮಾರು ಮೂವತ್ತಕ್ಕೂ ಹೆಚ್ಚು ಮೊಳೆಗಳನ್ನು ಒಡೆಯುವುದರಿಂದ ಮರಗಳಿಗೂ ‘ಗಾಯ’ ಮಾಡಿದಂತಾಗುತ್ತದೆ.
ಜೊತೆಗೆ ಇದರಿಂದ ಮರಗಳಿಗೆ ರೋಗ ಮತ್ತು ಕೀಟಗಳ ಸೋಂಕು, ಪೋಷಕಾಂಶಗಳ ಸರಬರಾಜಿಗೆ ತೊಂದರೆ, ಆಂತರಿಕ ಕೊಳೆತ, ಬೆಳವಣಿಗೆ ಕುಂಠಿತ, ಕಿರಿಯ ಮರಗಳಿಗೆ ಮಾರಕಗಳಾಗುವ ಸಮಸ್ಯೆಗಳೇ ಹೆಚ್ಚಾಗಿವೆ.
ಆದ್ದರಿಂದ ಮೈಸೂರು ಮಹಾನಗರ ಪಾಲಿಕೆ ಆಯುಕ್ತರು, ಮತ್ತು ೨೦೨೬ರ ಮೈಸೂರು ದಸರಾ ಮಹೋತ್ಸವಕ್ಕೆ ನೇಮಕಗೊಂಡಿರುವ ಅಽಕಾರಿಗಳು ಲೈಟಿಂಗ್ಸ್ ವೈಭವಕ್ಕೆ ಮೆರಗು ನೀಡಲು ಮೊಳೆಗಳನ್ನು ಒಡೆಯದೆ ಪರ್ಯಾಯ ವ್ಯವಸ್ಥೆಯ ಮೂಲಕ ಅಲಂಕಾರಕ್ಕೆ ವ್ಯವಸ್ಥೆ ಮಾಡಿಕೊಳ್ಳುವುದು ಉತ್ತಮ.
-ನಾಗೇಶ್ ಮಾನಸಗಂಗೋತ್ರಿ,
ಮೈಸೂರು
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…
ನ್ಯಾಯಬೆಲೆ ಅಂಗಡಿಗಳ ಗ್ರಾಹಕರ ಮನವಿಗೆ ಸರ್ಕಾರದ ಸ್ಪಂದನೆ ಅ.1ರಿಂದ ಬೆಳಿಗ್ಗೆ 7ರಿಂದ ಮಧ್ಯಾಹ್ನ 12; ಸಂಜೆ 4ರಿಂದ ರಾತ್ರಿ 8…