ಓದುಗರ ಪತ್ರ| ಸಂಸತ್ ಅಧಿವೇಶನ ವ್ಯರ್ಥವಾಗದಿರಲಿ

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲವೇ ತುಂಬಿರುತ್ತದೆ. ಇದರಿಂದ ಸಭಾಧ್ಯಕ್ಷರು ಸಭಾತ್ಯಾಗ ಮಾಡಿದ ಸಾಕಷ್ಟು ನಿದರ್ಶನಗಳಿವೆ. ಈ ಬಾರಿಯ ಅಽವೇಶನವು ಮಹತ್ವದ್ದಾಗಿದ್ದು, ಆರೋಗ್ಯಕರ ಚರ್ಚೆಗಳು ನಡೆಯಬೇಕಿದೆ. ವಕ್ಛ್ ಕಾಯ್ದೆಯ ತಿದ್ದುಪಡಿ ಬಗ್ಗೆ ಚರ್ಚೆ, ರಾಷ್ಟ್ರೀಯ ಸಹಕಾರ ವಿವಿ ಸ್ಥಾಪನೆ ವಿಧೇಯಕ, ಒಂದು ದೇಶ ಒಂದು ಚುನಾವಣೆ ಬಿಲ್ ಮಂಡನೆ ಸೇರಿದಂತೆ ಗೌತಮ್ ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ, ಮಣಿಪುರದ ಜನಾಂಗೀಯ ಸಂಘರ್ಷ, ದಿಲ್ಲಿಯನ್ನು ಆವರಿಸಿರುವ ವಿಷಗಾಳಿಗೆ ಪರಿಹಾರ ಮುಂತಾದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಅಽವೇಶನದಲ್ಲಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಸಂಸದರು ಕೇವಲ ಆರೋಪ-ಪ್ರತ್ಯಾರೋಪಗಳಲ್ಲೇ ಕಾಲಹರಣ ಮಾಡುವ ಬದಲು ಸಮಸ್ಯೆಗಳ ಕುರಿತು ಗಂಭೀರವಾಗಿ ಚರ್ಚಿಸಬೇಕಿದೆ. ಸದನದ ಸಮಯ ವನ್ನು ಹಾಳು ಮಾಡದೆ ಆಡಳಿತಾರೂಢ ಹಾಗೂ ವಿಪಕ್ಷಗಳ ನಾಯಕರು ಮಹತ್ವ ಪೂರ್ಣ ಚರ್ಚೆಗಳಿಗೆ, ನಿರ್ಣಯಗಳಿಗೆ ವೇದಿಕೆ ಕಲ್ಪಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago