ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.
ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲವೇ ತುಂಬಿರುತ್ತದೆ. ಇದರಿಂದ ಸಭಾಧ್ಯಕ್ಷರು ಸಭಾತ್ಯಾಗ ಮಾಡಿದ ಸಾಕಷ್ಟು ನಿದರ್ಶನಗಳಿವೆ. ಈ ಬಾರಿಯ ಅಽವೇಶನವು ಮಹತ್ವದ್ದಾಗಿದ್ದು, ಆರೋಗ್ಯಕರ ಚರ್ಚೆಗಳು ನಡೆಯಬೇಕಿದೆ. ವಕ್ಛ್ ಕಾಯ್ದೆಯ ತಿದ್ದುಪಡಿ ಬಗ್ಗೆ ಚರ್ಚೆ, ರಾಷ್ಟ್ರೀಯ ಸಹಕಾರ ವಿವಿ ಸ್ಥಾಪನೆ ವಿಧೇಯಕ, ಒಂದು ದೇಶ ಒಂದು ಚುನಾವಣೆ ಬಿಲ್ ಮಂಡನೆ ಸೇರಿದಂತೆ ಗೌತಮ್ ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ, ಮಣಿಪುರದ ಜನಾಂಗೀಯ ಸಂಘರ್ಷ, ದಿಲ್ಲಿಯನ್ನು ಆವರಿಸಿರುವ ವಿಷಗಾಳಿಗೆ ಪರಿಹಾರ ಮುಂತಾದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಅಽವೇಶನದಲ್ಲಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಸಂಸದರು ಕೇವಲ ಆರೋಪ-ಪ್ರತ್ಯಾರೋಪಗಳಲ್ಲೇ ಕಾಲಹರಣ ಮಾಡುವ ಬದಲು ಸಮಸ್ಯೆಗಳ ಕುರಿತು ಗಂಭೀರವಾಗಿ ಚರ್ಚಿಸಬೇಕಿದೆ. ಸದನದ ಸಮಯ ವನ್ನು ಹಾಳು ಮಾಡದೆ ಆಡಳಿತಾರೂಢ ಹಾಗೂ ವಿಪಕ್ಷಗಳ ನಾಯಕರು ಮಹತ್ವ ಪೂರ್ಣ ಚರ್ಚೆಗಳಿಗೆ, ನಿರ್ಣಯಗಳಿಗೆ ವೇದಿಕೆ ಕಲ್ಪಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…