ಓದುಗರ ಪತ್ರ| ಸಂಸತ್ ಅಧಿವೇಶನ ವ್ಯರ್ಥವಾಗದಿರಲಿ

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲವೇ ತುಂಬಿರುತ್ತದೆ. ಇದರಿಂದ ಸಭಾಧ್ಯಕ್ಷರು ಸಭಾತ್ಯಾಗ ಮಾಡಿದ ಸಾಕಷ್ಟು ನಿದರ್ಶನಗಳಿವೆ. ಈ ಬಾರಿಯ ಅಽವೇಶನವು ಮಹತ್ವದ್ದಾಗಿದ್ದು, ಆರೋಗ್ಯಕರ ಚರ್ಚೆಗಳು ನಡೆಯಬೇಕಿದೆ. ವಕ್ಛ್ ಕಾಯ್ದೆಯ ತಿದ್ದುಪಡಿ ಬಗ್ಗೆ ಚರ್ಚೆ, ರಾಷ್ಟ್ರೀಯ ಸಹಕಾರ ವಿವಿ ಸ್ಥಾಪನೆ ವಿಧೇಯಕ, ಒಂದು ದೇಶ ಒಂದು ಚುನಾವಣೆ ಬಿಲ್ ಮಂಡನೆ ಸೇರಿದಂತೆ ಗೌತಮ್ ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ, ಮಣಿಪುರದ ಜನಾಂಗೀಯ ಸಂಘರ್ಷ, ದಿಲ್ಲಿಯನ್ನು ಆವರಿಸಿರುವ ವಿಷಗಾಳಿಗೆ ಪರಿಹಾರ ಮುಂತಾದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಅಽವೇಶನದಲ್ಲಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಸಂಸದರು ಕೇವಲ ಆರೋಪ-ಪ್ರತ್ಯಾರೋಪಗಳಲ್ಲೇ ಕಾಲಹರಣ ಮಾಡುವ ಬದಲು ಸಮಸ್ಯೆಗಳ ಕುರಿತು ಗಂಭೀರವಾಗಿ ಚರ್ಚಿಸಬೇಕಿದೆ. ಸದನದ ಸಮಯ ವನ್ನು ಹಾಳು ಮಾಡದೆ ಆಡಳಿತಾರೂಢ ಹಾಗೂ ವಿಪಕ್ಷಗಳ ನಾಯಕರು ಮಹತ್ವ ಪೂರ್ಣ ಚರ್ಚೆಗಳಿಗೆ, ನಿರ್ಣಯಗಳಿಗೆ ವೇದಿಕೆ ಕಲ್ಪಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

5 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

9 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago