ಓದುಗರ ಪತ್ರ| ಸಂಸತ್ ಅಧಿವೇಶನ ವ್ಯರ್ಥವಾಗದಿರಲಿ

ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಕಲಾಪದಲ್ಲಿ ಹಲವು ವಿಚಾರಗಳು ಚರ್ಚೆಯಾಗುವ ಜತೆಗೆ ಹತ್ತು ಹಲವು ವಿಧೇಯಕಗಳು ಮಂಡನೆಯಾಗುವ ಸಾಧ್ಯತೆ ಇದೆ.

ಇತ್ತೀಚಿನ ವರ್ಷಗಳಲ್ಲಿ ಅಧಿವೇಶನದ ಬಹುಪಾಲು ಸಮಯ ಆಡಳಿತಾರೂಢ ಪಕ್ಷ ಹಾಗೂ ವಿಪಕ್ಷಗಳ ಆರೋಪ-ಪ್ರತ್ಯಾರೋಪಗಳಿಗೆ ಮೀಸಲಾಗುವ ವೇದಿಕೆಯಾಗಿಬಿಟ್ಟಿದೆ. ಕಲಾಪದಲ್ಲಿ ಚರ್ಚೆಗಿಂತ ಹೆಚ್ಚಾಗಿ ಗದ್ದಲವೇ ತುಂಬಿರುತ್ತದೆ. ಇದರಿಂದ ಸಭಾಧ್ಯಕ್ಷರು ಸಭಾತ್ಯಾಗ ಮಾಡಿದ ಸಾಕಷ್ಟು ನಿದರ್ಶನಗಳಿವೆ. ಈ ಬಾರಿಯ ಅಽವೇಶನವು ಮಹತ್ವದ್ದಾಗಿದ್ದು, ಆರೋಗ್ಯಕರ ಚರ್ಚೆಗಳು ನಡೆಯಬೇಕಿದೆ. ವಕ್ಛ್ ಕಾಯ್ದೆಯ ತಿದ್ದುಪಡಿ ಬಗ್ಗೆ ಚರ್ಚೆ, ರಾಷ್ಟ್ರೀಯ ಸಹಕಾರ ವಿವಿ ಸ್ಥಾಪನೆ ವಿಧೇಯಕ, ಒಂದು ದೇಶ ಒಂದು ಚುನಾವಣೆ ಬಿಲ್ ಮಂಡನೆ ಸೇರಿದಂತೆ ಗೌತಮ್ ಅದಾನಿ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣ, ಮಣಿಪುರದ ಜನಾಂಗೀಯ ಸಂಘರ್ಷ, ದಿಲ್ಲಿಯನ್ನು ಆವರಿಸಿರುವ ವಿಷಗಾಳಿಗೆ ಪರಿಹಾರ ಮುಂತಾದ ಹಲವು ಜ್ವಲಂತ ಸಮಸ್ಯೆಗಳ ಕುರಿತು ಅಽವೇಶನದಲ್ಲಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಸಂಸದರು ಕೇವಲ ಆರೋಪ-ಪ್ರತ್ಯಾರೋಪಗಳಲ್ಲೇ ಕಾಲಹರಣ ಮಾಡುವ ಬದಲು ಸಮಸ್ಯೆಗಳ ಕುರಿತು ಗಂಭೀರವಾಗಿ ಚರ್ಚಿಸಬೇಕಿದೆ. ಸದನದ ಸಮಯ ವನ್ನು ಹಾಳು ಮಾಡದೆ ಆಡಳಿತಾರೂಢ ಹಾಗೂ ವಿಪಕ್ಷಗಳ ನಾಯಕರು ಮಹತ್ವ ಪೂರ್ಣ ಚರ್ಚೆಗಳಿಗೆ, ನಿರ್ಣಯಗಳಿಗೆ ವೇದಿಕೆ ಕಲ್ಪಿಸಬೇಕು.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

44 mins ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

2 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

2 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

2 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

3 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

4 hours ago